Home / ಕವನ / ಕವಿತೆ / ಬೃಂದಾವನ

ಬೃಂದಾವನ

ಗೋಪಿಯರೊಡನಾ ಬೃಂದಾವನದಲಿ
ಲೀಲಾ ನಾಟಕವಾಡಿದ ನಲಿದು
ಬೃಂದಾವನವೇ ಕೃಷ್ಣನ ಬಾಲ್ಯದ
ತವರೂರಾಯಿತು ಜಸವನು ಮೆರೆದು.
ಹಿರಿಯರು ಬಂದರು ಹಿರಿತನ ಮರೆದು
ಎಳೆಯರು ಕುಣಿದರು ಕೃಷ್ಣನ ಕರೆದು
ತರುಣಿಯರೆಲ್ಲರು ಮೋಹವ ತೊರೆದು
ಕೊಳಲಿನ ಕೃಷ್ಣನ ರೂಪವ ನೆನೆದು
ಕೃಷ್ಣನ ಕೊಳಲಿನ ಗಾನವ ಕೇಳ್ದು
ಎಲ್ಲರು ಬರುವರು ಆತುರ ತಳೆದು.

ಜನನ-ಮರಣ ಜಂಜಾಟವ ಗೆಲಿದು
ಆತ್ಮದ ದರ್‍ಶನ ಮಾಡಿದ ತಾಣ
ಕೀಳ್ಮೇಲೆಂಬುದು-ಆಳ್-ಪೆಣ್ ಎಂಬುದು
ಮಾಸಿದ ಪಾವನ ಭೂಮಿ ನಿದಾನ.
ಪಶುಪಾಲನೆಯ ಕೃಷಿಕರ ಮಾನ
ಕೃಷ್ಣನ ಕೊಳಲಿನ ಮಧುರಸ ಪಾನ
ಎಲ್ಲರೊಳೊಂದೇ ನೋಟದ ಮೌನ
ಏನಿದು ಎಲ್ಲೂ ಮೆರೆವನು ಜಾಣ
ಮನಕದ್ದೊಯ್ದನು ಜನವನು ಕಾಣ
ಎಲ್ಲರ ಸೆಳೆಯುವ ಮೋಹನ ಬಾಣ.

ಯಮುನಾ ತೀರದ ಮರಗಳ ಮರೆಯಲಿ
ಬೆಟ್ಟದ ಮೇಗಡ ಸರ್‍ವರ ಒಳಗೆ
ಲಾಸ್ಯದಿ ಮೂಡುವ ತಾಪವನಳೆಯುತ
ಬಿಂಬಿಸುತಿರುವನು ಬರುತಲಿ ಹೊರಗೆ
ಗೋಪಿಯರ ಧ್ವನಿ ಕೇಳಿತು ಧರೆಗೆ
ದೂರವ ಕಾಣದೆ ಬಂದರು ಹೇಗೆ?
ಎಲ್ಲಿದೆ ಧಾವತಿ ಮನವೊಂದಾಗೆ
ಒಂದೇ ಕಾಂಬುದು ನೋಡಲು ಹೊರಗೆ
ಆತ್ಮದ ದರ್ಶನ ಮಾಡುತ ಒಳಗೆ
ಭಕ್ತರು ನಿಂದರು ಕೃಷ್ಣನ ಕರೆಗೆ-

ಬೃಂದಾವನದಲಿ ಸರ್‍ವರು ಸ್ತ್ರೀಯರು
ಕೃಷ್ಣನ ಹೂರತಿನ್ನಾವನು ಪುರುಷ
ಮೀರಾದೇವಿಯ ದರ್‍ಶನದಿಂದಲಿ
ಗೋಸ್ವಾಮಿಯ ಮತಿಯಾದುದು ಸರಸ.
ಗೋಪಿಯರಿಟ್ಟರು ಸತ್ಯದ ಕಳಸ
ಭಕ್ತರನೆಯ್ದಿತು ಪ್ರೇಮದ ಪರುಷ
ಆದುದು ಲೋಕದ ಮನ ಸಂತೋಷ
ಇರುವುದು ಇನ್ನೂ ಕೃಷ್ಣನ ಹಾಸ
ಯಮುನಾ ತೀರದ ಮಾನವ ವೇಷ
ನೋಡದೊ ನಿರುತಂ ರೂಪೋದ್ಭಾಸ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...