Home / ಕವನ / ಕವಿತೆ / ನೇಗಿಲು

ನೇಗಿಲು

ನೆಲದ ರಸವನ ಹಿಂಡಿ ನೇಗಿಲಿನ ಮೊನೆಯಿಂದ
ಅನ್ನಮಂ ಪಡಯುವರು ಮಣ್ಣಿನಿಂದ-
ಜೋಡೆತ್ತುಗಳ ಕಟ್ಟಿ ಜೀವದೆಳೆಗಳ ತಂದು
ಲೋಕಮಂ ಸಲಹುವುದು ಮೋದದಿಂದ-
ಕೆರೆದೆಳೆದು ಸಾರಮಂ ಸಾಲಿನಲಿ ನಿಲಿಸುವುದು
ಹಸನೆಸಗಿ ಸವಿಯೂಡಿ ಸುಲಭದಿಂದ-
ತೆರೆದು ಬೇರಿಗೆ ದಾರಿ ಬೆಳೆವ ಹಾದಿಯ ತೋರಿ
ಪ್ರಾಣವೀವುದು ಜಗಕೆ ಚೆಲುವಿನಿಂದ-
ನೇಗಿಲೇ ಸಾಧನವು ಸಕಲ ಜನಕೆ
ಸಾಗಿಸಲು ಸಂಸಾರ ಮುಕ್ತಿಪಥಕೆ
ನಿರಪೇಕ್ಷೆಯಿಂ ನೆರೆದು ಧರ್‍ಮರಥಕೆ
ಕರವಿತ್ತು ನಡೆಸುವುದು ನೇಗಿಲರಕೆ-

ಧ್ಯಾನ ಧಾನ್ಯವ ಬಿತ್ತಿ ಎದೆಯ ಹಸನಂ ಗೆಯ್ದು
ಈ ನೇಗಿಲೇ ಮನವ ಹಗುರೆನಿಪುದು.
ಗಾನ ಮಾಡುವುದಿದುವೆ ಜೀವತಂತಿಯ ಮಿಡಿದು
ಪರಲೋಕ ಮಂತ್ರಗಳ ಹಾಡುತಿಹುದು
ಸರುವ ದುರಿತವ ಮರೆಸಿ ಮುಕ್ತಿಸುಧೆಯನ್ನೆರೆದು
ನರಕ ಬಾಗಿಲ ಮುಚ್ಚಿ ಸಗ್ಗ ತರೆದು
ನರಲೋಕ ಕರ್‍ಮಗಳ ಕಟ್ಟುಗಳ ಹರಿದೊಗೆದು
ಹಿರಿದೆನಿಸಿ ನೈಜಮಂ ತೋರಿಸುವುದು.
ಲೋಕಮಂ ಕಣ್ದೆರೆಸಿ ಜ್ಞಾನಯೋಗಿ
ವಾಕ್ಶುದ್ಧಿ ಗೆಯ್ವುದಿದು ಸತ್ಯಮಾಗಿ
ತ್ಯಾಗಿ ಈ ನೇಗಿಲೇ ಪರಮ ಭೋಗಿ
ನೇಗಿಲೇ ಧರೆಯಲ್ಲಿ ನಿತ್ಯ ಯೋಗಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...