Home / ಕವನ / ಕವಿತೆ / ಸಂಜೆಯ ಹಾಡು

ಸಂಜೆಯ ಹಾಡು

ಹಗಲೆಲ್ಲಾ ಕಳೆಯಿತು ಸೂರ್ಯನು ಮುಳುಗೆ;
ಖಗ ಹಾರಿತು ಗೂಡಿನ ಒಳಗೆ;
ಜಗವೆಲ್ಲಾ ಬೆಳಗಿತು ದೀಪವು ಬೆಳಗೆ,
ಗಗನಾಂಗಣದಲ್ಲಿ ಉಡು ತೊಳಗೆ;
ಮೃಗವೆಲ್ಲಾ ಅಲೆವವು ಬೆಟ್ಟದ ಕೆಳಗೆ;
ಹೊಗುತಿರುವುದು ಕತ್ತಲೆ ಇಳೆಗೆ.

ಓ-ಮಗುವೇ, ನೀ ಸಂಜೆಯ ಗಳಿಗೆಯಲಿ
ನಗುತಲಿ ಬಾ ನನ್ನಯ ಬಳಿಗೆ; ಕೈ
ಮುಗಿಯುತ ದೇವರ ಪದಗಳಿಗೆ, ಈ
ಹಗಲಲ್ಲಿ ನಿನ್ನನ್ನು ಕಾಯ್ದಾ ದೇವರಿಗೆ,
ಮಿಗೆ ವಂದಿಸು ಸಂತಸದಿಂದಾ.

ವದನಾ ಭೂಷಣವೇ ನೀರಿನ ಕೆರೆಯು
ಘನ ಸರಸಿಗೆ ಕೆಂದಾವರೆಯು;
ವನಿತಾಲಂಕಾರವೆ ಸುಗುಣದ ಸಿರಿಯು;
ಜನರಾಷ್ಟ್ರಕೆ ಧರ್ಮದ ದೊರೆಯು;
ಮನುಜನಿಗಾಭರಣವೆ ವಿದ್ಯೆಯ ಪರಿಯು;
ಮನೆಗಾ ಚೆಲು ಮಕ್ಕಳು ಮರಿಯು.

ಹಾ, ತನಯಾ, ಸಜ್ಜನರೊಡವೆರೆಯು; ದು-
ರ್‍ಜನ ಸಂಗವ ಬೇಗನೆ ತೊರೆಯು; ವಂ-
ಚನೆ ಮರೆಮೋಸಗಳನ್ನು ಮರೆಯು; ನೀ-
ನೆನೆಯದಿರೈ ಕೆಡುಕನು ಲೋಕದ ಜನಕೆ;
ಜನದೂಷಣೆ ಬಿಡಬೇಕೆಂದಾ.

ಇರಬೇಕೈ ಮಕ್ಕಳ ಚೆಲುಮನೆತನವು;
ಸರಿ ಹಾಲನು ಕರೆವಾ ದನವು;
ಬರಬೇಕೈ ತನ್ನಯ ಬೆವರಿನ ಧನವು;
ಭರದಾಪತ್ಕಾಲಕೆ ಜನವು;
ಹೊರಬೇಕೈ ಕಷ್ಟವ ಸಹಿಸುವ ತನುವು;
ಪರದುಃಖಕ ಕೂಗುವ ಮನವು.

ಶ್ರೀ ಗುರುಹಿರಿಯರ ನೀನನುದಿನವು ತಾಂ
ಪರಿಪೂಜಿಪಗುಣ ಲಾಂಛನವು; ಇದು
ದೊರೆಕೊಂಬುದ ಜನಕೆ ಘನವು; ಸೋ
ದರರೆಂಬಾ ಭಾವನೆ ಸರ್‍ವರೊಳಿರಿಸು;
ಭರತಾತ್ಮಜನೆನ್ನಿಸು ಕಂದಾ.

ಕೊಡಬೇಕೈ ಕಿವಿಯನು ಸರ್‍ವರ ನುಡಿಗೆ;
ನುಡಿಬಾರದು ನೀನಡಿಗಡಿಗೆ;
ಉಡಬೇಕೈ ಪದವಿಗೆ ಸರಿಯಾದುಡಿಗೆ;
ತೊಡಬಾರದು ಅನ್ಯರ ತೊಡಿಗೆ;
ಬಿಡಬೇಕೈ ಹಣವನು ಧರ್‍ಮದ ಕುಡಿಗೆ,
ಬಡವಾಗಿರದಂದದಿ ಕಡೆಗೆ.

ನೀ ಪೊಡಮಡು ಗುರುಹಿರಿಯರ ಅಡಿಗೆ; ನೀ
ನಿಡು ಸತ್ಯವ ಕಾರ್‍ಯಗಳೆಡೆಗೆ; ನೀ
ನಡೆವೈ ಸಂಪತ್ತಿನ ತಡಿಗೆ; ಈ
ಮುಡಿಹೂಗಳ್ ಬಾಡದ ಸದ್ವಿಧದಿಂದಾ
ಬಡಕೂಸನು ಸಲಹೋ, ಮುಕುಂದಾ.
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...