Home / ಕವನ / ಕವಿತೆ / ಸಂಜೆಯ ಹಾಡು

ಸಂಜೆಯ ಹಾಡು

ಹಗಲೆಲ್ಲಾ ಕಳೆಯಿತು ಸೂರ್ಯನು ಮುಳುಗೆ;
ಖಗ ಹಾರಿತು ಗೂಡಿನ ಒಳಗೆ;
ಜಗವೆಲ್ಲಾ ಬೆಳಗಿತು ದೀಪವು ಬೆಳಗೆ,
ಗಗನಾಂಗಣದಲ್ಲಿ ಉಡು ತೊಳಗೆ;
ಮೃಗವೆಲ್ಲಾ ಅಲೆವವು ಬೆಟ್ಟದ ಕೆಳಗೆ;
ಹೊಗುತಿರುವುದು ಕತ್ತಲೆ ಇಳೆಗೆ.

ಓ-ಮಗುವೇ, ನೀ ಸಂಜೆಯ ಗಳಿಗೆಯಲಿ
ನಗುತಲಿ ಬಾ ನನ್ನಯ ಬಳಿಗೆ; ಕೈ
ಮುಗಿಯುತ ದೇವರ ಪದಗಳಿಗೆ, ಈ
ಹಗಲಲ್ಲಿ ನಿನ್ನನ್ನು ಕಾಯ್ದಾ ದೇವರಿಗೆ,
ಮಿಗೆ ವಂದಿಸು ಸಂತಸದಿಂದಾ.

ವದನಾ ಭೂಷಣವೇ ನೀರಿನ ಕೆರೆಯು
ಘನ ಸರಸಿಗೆ ಕೆಂದಾವರೆಯು;
ವನಿತಾಲಂಕಾರವೆ ಸುಗುಣದ ಸಿರಿಯು;
ಜನರಾಷ್ಟ್ರಕೆ ಧರ್ಮದ ದೊರೆಯು;
ಮನುಜನಿಗಾಭರಣವೆ ವಿದ್ಯೆಯ ಪರಿಯು;
ಮನೆಗಾ ಚೆಲು ಮಕ್ಕಳು ಮರಿಯು.

ಹಾ, ತನಯಾ, ಸಜ್ಜನರೊಡವೆರೆಯು; ದು-
ರ್‍ಜನ ಸಂಗವ ಬೇಗನೆ ತೊರೆಯು; ವಂ-
ಚನೆ ಮರೆಮೋಸಗಳನ್ನು ಮರೆಯು; ನೀ-
ನೆನೆಯದಿರೈ ಕೆಡುಕನು ಲೋಕದ ಜನಕೆ;
ಜನದೂಷಣೆ ಬಿಡಬೇಕೆಂದಾ.

ಇರಬೇಕೈ ಮಕ್ಕಳ ಚೆಲುಮನೆತನವು;
ಸರಿ ಹಾಲನು ಕರೆವಾ ದನವು;
ಬರಬೇಕೈ ತನ್ನಯ ಬೆವರಿನ ಧನವು;
ಭರದಾಪತ್ಕಾಲಕೆ ಜನವು;
ಹೊರಬೇಕೈ ಕಷ್ಟವ ಸಹಿಸುವ ತನುವು;
ಪರದುಃಖಕ ಕೂಗುವ ಮನವು.

ಶ್ರೀ ಗುರುಹಿರಿಯರ ನೀನನುದಿನವು ತಾಂ
ಪರಿಪೂಜಿಪಗುಣ ಲಾಂಛನವು; ಇದು
ದೊರೆಕೊಂಬುದ ಜನಕೆ ಘನವು; ಸೋ
ದರರೆಂಬಾ ಭಾವನೆ ಸರ್‍ವರೊಳಿರಿಸು;
ಭರತಾತ್ಮಜನೆನ್ನಿಸು ಕಂದಾ.

ಕೊಡಬೇಕೈ ಕಿವಿಯನು ಸರ್‍ವರ ನುಡಿಗೆ;
ನುಡಿಬಾರದು ನೀನಡಿಗಡಿಗೆ;
ಉಡಬೇಕೈ ಪದವಿಗೆ ಸರಿಯಾದುಡಿಗೆ;
ತೊಡಬಾರದು ಅನ್ಯರ ತೊಡಿಗೆ;
ಬಿಡಬೇಕೈ ಹಣವನು ಧರ್‍ಮದ ಕುಡಿಗೆ,
ಬಡವಾಗಿರದಂದದಿ ಕಡೆಗೆ.

ನೀ ಪೊಡಮಡು ಗುರುಹಿರಿಯರ ಅಡಿಗೆ; ನೀ
ನಿಡು ಸತ್ಯವ ಕಾರ್‍ಯಗಳೆಡೆಗೆ; ನೀ
ನಡೆವೈ ಸಂಪತ್ತಿನ ತಡಿಗೆ; ಈ
ಮುಡಿಹೂಗಳ್ ಬಾಡದ ಸದ್ವಿಧದಿಂದಾ
ಬಡಕೂಸನು ಸಲಹೋ, ಮುಕುಂದಾ.
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...