ಸಂಜೆಯ ಹಾಡು

ಹಗಲೆಲ್ಲಾ ಕಳೆಯಿತು ಸೂರ್ಯನು ಮುಳುಗೆ;
ಖಗ ಹಾರಿತು ಗೂಡಿನ ಒಳಗೆ;
ಜಗವೆಲ್ಲಾ ಬೆಳಗಿತು ದೀಪವು ಬೆಳಗೆ,
ಗಗನಾಂಗಣದಲ್ಲಿ ಉಡು ತೊಳಗೆ;
ಮೃಗವೆಲ್ಲಾ ಅಲೆವವು ಬೆಟ್ಟದ ಕೆಳಗೆ;
ಹೊಗುತಿರುವುದು ಕತ್ತಲೆ ಇಳೆಗೆ.

ಓ-ಮಗುವೇ, ನೀ ಸಂಜೆಯ ಗಳಿಗೆಯಲಿ
ನಗುತಲಿ ಬಾ ನನ್ನಯ ಬಳಿಗೆ; ಕೈ
ಮುಗಿಯುತ ದೇವರ ಪದಗಳಿಗೆ, ಈ
ಹಗಲಲ್ಲಿ ನಿನ್ನನ್ನು ಕಾಯ್ದಾ ದೇವರಿಗೆ,
ಮಿಗೆ ವಂದಿಸು ಸಂತಸದಿಂದಾ.

ವದನಾ ಭೂಷಣವೇ ನೀರಿನ ಕೆರೆಯು
ಘನ ಸರಸಿಗೆ ಕೆಂದಾವರೆಯು;
ವನಿತಾಲಂಕಾರವೆ ಸುಗುಣದ ಸಿರಿಯು;
ಜನರಾಷ್ಟ್ರಕೆ ಧರ್ಮದ ದೊರೆಯು;
ಮನುಜನಿಗಾಭರಣವೆ ವಿದ್ಯೆಯ ಪರಿಯು;
ಮನೆಗಾ ಚೆಲು ಮಕ್ಕಳು ಮರಿಯು.

ಹಾ, ತನಯಾ, ಸಜ್ಜನರೊಡವೆರೆಯು; ದು-
ರ್‍ಜನ ಸಂಗವ ಬೇಗನೆ ತೊರೆಯು; ವಂ-
ಚನೆ ಮರೆಮೋಸಗಳನ್ನು ಮರೆಯು; ನೀ-
ನೆನೆಯದಿರೈ ಕೆಡುಕನು ಲೋಕದ ಜನಕೆ;
ಜನದೂಷಣೆ ಬಿಡಬೇಕೆಂದಾ.

ಇರಬೇಕೈ ಮಕ್ಕಳ ಚೆಲುಮನೆತನವು;
ಸರಿ ಹಾಲನು ಕರೆವಾ ದನವು;
ಬರಬೇಕೈ ತನ್ನಯ ಬೆವರಿನ ಧನವು;
ಭರದಾಪತ್ಕಾಲಕೆ ಜನವು;
ಹೊರಬೇಕೈ ಕಷ್ಟವ ಸಹಿಸುವ ತನುವು;
ಪರದುಃಖಕ ಕೂಗುವ ಮನವು.

ಶ್ರೀ ಗುರುಹಿರಿಯರ ನೀನನುದಿನವು ತಾಂ
ಪರಿಪೂಜಿಪಗುಣ ಲಾಂಛನವು; ಇದು
ದೊರೆಕೊಂಬುದ ಜನಕೆ ಘನವು; ಸೋ
ದರರೆಂಬಾ ಭಾವನೆ ಸರ್‍ವರೊಳಿರಿಸು;
ಭರತಾತ್ಮಜನೆನ್ನಿಸು ಕಂದಾ.

ಕೊಡಬೇಕೈ ಕಿವಿಯನು ಸರ್‍ವರ ನುಡಿಗೆ;
ನುಡಿಬಾರದು ನೀನಡಿಗಡಿಗೆ;
ಉಡಬೇಕೈ ಪದವಿಗೆ ಸರಿಯಾದುಡಿಗೆ;
ತೊಡಬಾರದು ಅನ್ಯರ ತೊಡಿಗೆ;
ಬಿಡಬೇಕೈ ಹಣವನು ಧರ್‍ಮದ ಕುಡಿಗೆ,
ಬಡವಾಗಿರದಂದದಿ ಕಡೆಗೆ.

ನೀ ಪೊಡಮಡು ಗುರುಹಿರಿಯರ ಅಡಿಗೆ; ನೀ
ನಿಡು ಸತ್ಯವ ಕಾರ್‍ಯಗಳೆಡೆಗೆ; ನೀ
ನಡೆವೈ ಸಂಪತ್ತಿನ ತಡಿಗೆ; ಈ
ಮುಡಿಹೂಗಳ್ ಬಾಡದ ಸದ್ವಿಧದಿಂದಾ
ಬಡಕೂಸನು ಸಲಹೋ, ಮುಕುಂದಾ.
*****
(ಕವಿಶಿಷ್ಯ)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೋರಿನಾಳದಿಂದೆಂತೆತ್ತುವುದೋ ಕೃಷಿಯನ್ನು?
Next post ಪದ ಜನಪದ

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…