Home / ಕವನ / ಕವಿತೆ / ಪೂರ್‍ಣತೆ

ಪೂರ್‍ಣತೆ

ನೀಲವರ್‍ಣದ ಮುಗಿಲು ಮೋಡಗಳ ಸುಳಿಯಿಲ್ಲ
ತಿಳಿಬೈಲು ಸೊಗಸು
ನಾಲ್ದೆಸೆಗೆ ಹಸರು ಕುಸುರಿನ ಧರಣಿ ಕಣ್ತುಂಬ
ಕಂಡರಳಿ ಮನಸು

ಸ್ವರದೆಗೆದು ಹಾಡಿದೆನು ಸ್ವರವೇರಿ ಸುಳಿಯುತಿದೆ
ಗಿರಿಗಗನದಲ್ಲಿ
ಗಿರಿಯ ಶಿಖರದ ಮೇಲೆ ನಿಂತಿರುವೆ ಅರಳುತಿವೆ
ಮಲ್ಲಿಗೆಯು ಅಲ್ಲಿ

ಕೇಳುತಿದೆ ಅಲ್ಲೊಂದು ನಾದ ಗಗನಾಂಗಣದ
ಕೊನೆದಂಡೆಯಲ್ಲಿ
ಕೇಳಿದೆನು ಕಿವಿಗೊಟ್ಟು ಮನಸಿಟ್ಟು ಬಗೆನೆಟ್ಟು
ಹಿರಿಯಾಶೆಯಲ್ಲಿ

ನೆನೆನೆನೆದು ತಿರುತಿರುಗಿ ನಾದನಾವೀನ್ಯವನು
ಬಲು ಬೆರಗುಗೊಂಡು
ಮನಮರುಗಿ ಹರಿಯುತಿದೆ ಬೆರೆಯಬೇಕೆಂಬಾಸೆ
ಒಳಗುಕ್ಕಿ ಬಂದು

ಗಿರಿಯಲ್ಲಿ ಝರಿಯಲ್ಲಿ ದರಿಯಲ್ಲಿ ತುಳುಕುತಿದೆ
ಸುಳಿಗಾಳಿಯಲ್ಲಿ
ಧರೆಯೆಲ್ಲ ತೇಲುತಿದೆ ಮಿದುವಾಗಿ ಅಲೆದಲೆದು
ಆ ನಾದದಲ್ಲಿ

ಹೃದಯಮಂಟಪದಿಂದ ಹಾರುತೇರಿತು ಮೇಲೆ
ಹಿರಿಯಕ್ಕಿಯೊಂದು
ಮದವೇರಿ ಮೈಮರೆದು ತೂರನೆಗೆಯಿತು ವಿರಹ
ನೆರೆ ಉಕ್ಕಿ ಬಂದು

ಬಹುದಿನದ ಅಗಲಿಕೆಯ ಅಂತರವು ತಾನಳಿದು
ಸಲೆಮಾಯವಾಯ್ತು
ಬಹುಕಾಲದಾ ಆಸೆ ಹೊಮ್ಮಿ ಹೊಂದಿಕೆಗೂಡಿ
ಪರಿಪೂರ್‍ಣವಾಯ್ತು
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...