ಪೂರ್‍ಣತೆ

ನೀಲವರ್‍ಣದ ಮುಗಿಲು ಮೋಡಗಳ ಸುಳಿಯಿಲ್ಲ
ತಿಳಿಬೈಲು ಸೊಗಸು
ನಾಲ್ದೆಸೆಗೆ ಹಸರು ಕುಸುರಿನ ಧರಣಿ ಕಣ್ತುಂಬ
ಕಂಡರಳಿ ಮನಸು

ಸ್ವರದೆಗೆದು ಹಾಡಿದೆನು ಸ್ವರವೇರಿ ಸುಳಿಯುತಿದೆ
ಗಿರಿಗಗನದಲ್ಲಿ
ಗಿರಿಯ ಶಿಖರದ ಮೇಲೆ ನಿಂತಿರುವೆ ಅರಳುತಿವೆ
ಮಲ್ಲಿಗೆಯು ಅಲ್ಲಿ

ಕೇಳುತಿದೆ ಅಲ್ಲೊಂದು ನಾದ ಗಗನಾಂಗಣದ
ಕೊನೆದಂಡೆಯಲ್ಲಿ
ಕೇಳಿದೆನು ಕಿವಿಗೊಟ್ಟು ಮನಸಿಟ್ಟು ಬಗೆನೆಟ್ಟು
ಹಿರಿಯಾಶೆಯಲ್ಲಿ

ನೆನೆನೆನೆದು ತಿರುತಿರುಗಿ ನಾದನಾವೀನ್ಯವನು
ಬಲು ಬೆರಗುಗೊಂಡು
ಮನಮರುಗಿ ಹರಿಯುತಿದೆ ಬೆರೆಯಬೇಕೆಂಬಾಸೆ
ಒಳಗುಕ್ಕಿ ಬಂದು

ಗಿರಿಯಲ್ಲಿ ಝರಿಯಲ್ಲಿ ದರಿಯಲ್ಲಿ ತುಳುಕುತಿದೆ
ಸುಳಿಗಾಳಿಯಲ್ಲಿ
ಧರೆಯೆಲ್ಲ ತೇಲುತಿದೆ ಮಿದುವಾಗಿ ಅಲೆದಲೆದು
ಆ ನಾದದಲ್ಲಿ

ಹೃದಯಮಂಟಪದಿಂದ ಹಾರುತೇರಿತು ಮೇಲೆ
ಹಿರಿಯಕ್ಕಿಯೊಂದು
ಮದವೇರಿ ಮೈಮರೆದು ತೂರನೆಗೆಯಿತು ವಿರಹ
ನೆರೆ ಉಕ್ಕಿ ಬಂದು

ಬಹುದಿನದ ಅಗಲಿಕೆಯ ಅಂತರವು ತಾನಳಿದು
ಸಲೆಮಾಯವಾಯ್ತು
ಬಹುಕಾಲದಾ ಆಸೆ ಹೊಮ್ಮಿ ಹೊಂದಿಕೆಗೂಡಿ
ಪರಿಪೂರ್‍ಣವಾಯ್ತು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಣೇಶ ಬಾರೋ
Next post ಸುಮತೀಂದ್ರ ನಾಡಿಗರ “ದಾಂಪತ್ಯ ಗೀತ”

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…