ಪೂರ್‍ಣತೆ

ನೀಲವರ್‍ಣದ ಮುಗಿಲು ಮೋಡಗಳ ಸುಳಿಯಿಲ್ಲ
ತಿಳಿಬೈಲು ಸೊಗಸು
ನಾಲ್ದೆಸೆಗೆ ಹಸರು ಕುಸುರಿನ ಧರಣಿ ಕಣ್ತುಂಬ
ಕಂಡರಳಿ ಮನಸು

ಸ್ವರದೆಗೆದು ಹಾಡಿದೆನು ಸ್ವರವೇರಿ ಸುಳಿಯುತಿದೆ
ಗಿರಿಗಗನದಲ್ಲಿ
ಗಿರಿಯ ಶಿಖರದ ಮೇಲೆ ನಿಂತಿರುವೆ ಅರಳುತಿವೆ
ಮಲ್ಲಿಗೆಯು ಅಲ್ಲಿ

ಕೇಳುತಿದೆ ಅಲ್ಲೊಂದು ನಾದ ಗಗನಾಂಗಣದ
ಕೊನೆದಂಡೆಯಲ್ಲಿ
ಕೇಳಿದೆನು ಕಿವಿಗೊಟ್ಟು ಮನಸಿಟ್ಟು ಬಗೆನೆಟ್ಟು
ಹಿರಿಯಾಶೆಯಲ್ಲಿ

ನೆನೆನೆನೆದು ತಿರುತಿರುಗಿ ನಾದನಾವೀನ್ಯವನು
ಬಲು ಬೆರಗುಗೊಂಡು
ಮನಮರುಗಿ ಹರಿಯುತಿದೆ ಬೆರೆಯಬೇಕೆಂಬಾಸೆ
ಒಳಗುಕ್ಕಿ ಬಂದು

ಗಿರಿಯಲ್ಲಿ ಝರಿಯಲ್ಲಿ ದರಿಯಲ್ಲಿ ತುಳುಕುತಿದೆ
ಸುಳಿಗಾಳಿಯಲ್ಲಿ
ಧರೆಯೆಲ್ಲ ತೇಲುತಿದೆ ಮಿದುವಾಗಿ ಅಲೆದಲೆದು
ಆ ನಾದದಲ್ಲಿ

ಹೃದಯಮಂಟಪದಿಂದ ಹಾರುತೇರಿತು ಮೇಲೆ
ಹಿರಿಯಕ್ಕಿಯೊಂದು
ಮದವೇರಿ ಮೈಮರೆದು ತೂರನೆಗೆಯಿತು ವಿರಹ
ನೆರೆ ಉಕ್ಕಿ ಬಂದು

ಬಹುದಿನದ ಅಗಲಿಕೆಯ ಅಂತರವು ತಾನಳಿದು
ಸಲೆಮಾಯವಾಯ್ತು
ಬಹುಕಾಲದಾ ಆಸೆ ಹೊಮ್ಮಿ ಹೊಂದಿಕೆಗೂಡಿ
ಪರಿಪೂರ್‍ಣವಾಯ್ತು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಣೇಶ ಬಾರೋ
Next post ಸುಮತೀಂದ್ರ ನಾಡಿಗರ “ದಾಂಪತ್ಯ ಗೀತ”

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

cheap jordans|wholesale air max|wholesale jordans|wholesale jewelry|wholesale jerseys