ಕಂಡೆ

ಬಿರಿಬಿರಿದ ಬಕುಲ ಪರಿಮಳ ಸೂಸಿಚೆಲ್ಲಿ
ಹರವಿರುವ ಹಾಲ್ಬೆಳ್ಳಿ ಬೆಳದಿಂಗಳಲ್ಲಿ
ತರುಲತೆಯ ಕಿರುಶಬ್ದ ಸುಳಿಗಾಳಿಯಲ್ಲಿ
ಮರಿಕೋಗಿಲೆಯ ಕೂಗು ಮಧುರಧ್ವನಿಯಲ್ಲಿ

ಝರಿಯೊಂದು ಚಿಮ್ಮುತಿದೆ ಗಿರಿಶಿಖರದಲ್ಲಿ
ದರಿಯಲ್ಲಿ ಹರಿಯುತಿದೆ ಬಹುದೂರದಲ್ಲಿ
ಹರವಿಕೊಂಡಿದೆ ಹಸರು ಧರುಣಿಯಲ್ಲಿ
ಸುರರಿಗೀ ಸುಖವಿಲ್ಲ ಸುರಲೋಕದಲ್ಲಿ
* * * *
ಸವಿಗಾರನಗಲಿಕೆಗೆ ಬಿರಿಬಿರಿಯುತಿತ್ತು
ಸವಿಯೆಲ್ಲ ಕಹಿಯಾಗಿ ತೋರುತಿತ್ತು
ಸುಳಿಗಾಳಿ ಬಿಸಿಯುಸಿರ ಸೆಲೆ ಕಾರುತಿತ್ತು,
ತಿಳಿಗಣ್ಣು ಕಳೆ ಹೀನವಾಗಿ ಕುಳಿತಿತ್ತು
* * * *
ಮಿಂಚೊಂದು ವಿಂಚಿ ಆ ಕ್ಷಣ ಮಾಯವಾಯ್ತು
ಮಿಂಚಿನಲಿ ಸವಿಗಾರನನು ಕಂಡುದಾಯ್ತು
ತೋರುತಿಹುದೆಲ್ಲ ಜಗ ಗುರುರೂಪದಲ್ಲಿ
ಬೀರುತಿದೆ ಅಸುಕಾಂತಿ ಜಡಸೃಷ್ಟಿಯಲ್ಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏಕನಾದ
Next post ವಡ್ಡರ್ಸೆ ರಘುರಾಮಶೆಟ್ಟಿ ಅವರ ‘ಬಹುರೂಪಿ ಅರಸು’-ನೇರ ಅನುಸಂಧಾನ

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

cheap jordans|wholesale air max|wholesale jordans|wholesale jewelry|wholesale jerseys