ಕವಿ

ಸೌಂದರ್‍ಯಸರಸಿಯೊಳು ಕವನೀಯ ಸುಕುಮಾರ
ಸಿರಿರಾಜಹಂಸವಾಗಿ
ಇಂದು ಮೂಜಗ ಮೀರಿ ಅವರ ಗದ್ದುಗೆ ಏರಿ
ಆಳ್ವ ಅಧಿಕಾರಿಯಾಗಿ

ಋತುರಾಜ ನವತರುಣ ಮಧುವನದ ಅಭಿರಾಮ
ಮೃದು ಮಂದವಾಯುವಾಗಿ
ಅತಿರೂಪಲಾವಣ್ಯ ಅರೆದೆರೆದು ಬಿರಿಬಿರಿದ
ಅರಳು ಹೂದುಂಬಿಯಾಗಿ

ಸುರಗಂಗೆ ತೆರೆಯಾಗಿ ಕೊಚ್ಚಿಕೊಳ್ಳುವೆ ಪಾಪ
ಹರಿದು ಪಾತಾಳ ಮುಟ್ಟಿ
ಮೆರೆವ ಕವಿಕುಲಕುಮುದ ಗರ್‍ಭಸ್ಥ ನಿತ್ಯಸುಧೆ
ಸುರಿಸುರಿಸಿ ಧಾರಿಗಟ್ಟಿ

ಮಕರಂದ ಶರಸೂರೆಯಾಗಿರುವ ಮೃದುಮೃದುಲ
ಕುಸುಮ ನಲಿನಲಿಯುವಲ್ಲಿ
ಸುಕುಮಾರ ಒಳ್ಳಿಮಂಟಪದಲ್ಲಿ ಅಡಗಿ ಮೈ
ಮರೆವೆನಾನಂದದಲ್ಲಿ

ಮನ್ಮನ ಮಹಾಸಿಂಧು ತಳತನಕ ಮುಳುಗುವೆನು
ಮುತ್ತುರತ್ನಂಗಳಲ್ಲಿ
ಜನ್ಮ ಜನ್ಮದ ವಿಪುಲ ಭೋಗಭಾಂಡಾರವನು
ಒಡೆಯುವೆನು ಯೋಗದಲ್ಲಿ

ರವಿಯ ರಥವನ್ನೇರಿ ವಿಶ್ವಭ್ರಮಣವ ಮಾಡಿ
ನಗುವೆನಾ ಆಡಿ ಹಾಡಿ
ಸವಿಸುಖದ ಕಲ್ಪನಾಕಾಶದೊಳು ಹಾರುವೆನು
ಮೋಡಗಳ ಜೋಡಿಗೂಡಿ

ಸುರಸ್ವರ್‍ಗಲೋಕದಾ ಅವರದೂತನು ನಾನು
ನನಗಿಲ್ಲ ಆಹುದು ಬಹುದು
ತಿರುಕರಲಿ ತಿರುಗಿದರು ರಾಜರ್‍ಷಿ ಬ್ರಹ್ಮರ್‍ಷಿ
ದೇವರ್‍ಷಿ ನಾನೆ ಹೌದು

ಚಿರಗಾನ ಲಹರಿಯಲಿ ಸಿರಿಬೆಡಗ ಬೆರಸುತಲಿ
ಬೆಳಸುವೆನು ಭಾವವನ್ನು
ಅರಿಯಲಾರದ ಗೂಢ ಗೀತೆಯಲ್ಲಿ ಹಾಡುವೆನು
ಭುವನದಲ್ಲಿ ಸ್ವರ್‍ಗವನ್ನು

ಝರಿಯಲ್ಲಿ ಬೆರೆಯುವೆನು ಸೇರುವೆನು ಹೂವಿನಲಿ
ನಲಿನಲಿದು ಬಾಳುತಿರುವೆ
ಬರಿಬಯಲಿನಾಕಾಶದುಡಿಯಲ್ಲಿ ಹೊಡಕರಿಸಿ
ಹಕ್ಕಿಯೊಲು ಹಾಡುತಿರುವೆ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...