ಕವಿ

ಸೌಂದರ್‍ಯಸರಸಿಯೊಳು ಕವನೀಯ ಸುಕುಮಾರ
ಸಿರಿರಾಜಹಂಸವಾಗಿ
ಇಂದು ಮೂಜಗ ಮೀರಿ ಅವರ ಗದ್ದುಗೆ ಏರಿ
ಆಳ್ವ ಅಧಿಕಾರಿಯಾಗಿ

ಋತುರಾಜ ನವತರುಣ ಮಧುವನದ ಅಭಿರಾಮ
ಮೃದು ಮಂದವಾಯುವಾಗಿ
ಅತಿರೂಪಲಾವಣ್ಯ ಅರೆದೆರೆದು ಬಿರಿಬಿರಿದ
ಅರಳು ಹೂದುಂಬಿಯಾಗಿ

ಸುರಗಂಗೆ ತೆರೆಯಾಗಿ ಕೊಚ್ಚಿಕೊಳ್ಳುವೆ ಪಾಪ
ಹರಿದು ಪಾತಾಳ ಮುಟ್ಟಿ
ಮೆರೆವ ಕವಿಕುಲಕುಮುದ ಗರ್‍ಭಸ್ಥ ನಿತ್ಯಸುಧೆ
ಸುರಿಸುರಿಸಿ ಧಾರಿಗಟ್ಟಿ

ಮಕರಂದ ಶರಸೂರೆಯಾಗಿರುವ ಮೃದುಮೃದುಲ
ಕುಸುಮ ನಲಿನಲಿಯುವಲ್ಲಿ
ಸುಕುಮಾರ ಒಳ್ಳಿಮಂಟಪದಲ್ಲಿ ಅಡಗಿ ಮೈ
ಮರೆವೆನಾನಂದದಲ್ಲಿ

ಮನ್ಮನ ಮಹಾಸಿಂಧು ತಳತನಕ ಮುಳುಗುವೆನು
ಮುತ್ತುರತ್ನಂಗಳಲ್ಲಿ
ಜನ್ಮ ಜನ್ಮದ ವಿಪುಲ ಭೋಗಭಾಂಡಾರವನು
ಒಡೆಯುವೆನು ಯೋಗದಲ್ಲಿ

ರವಿಯ ರಥವನ್ನೇರಿ ವಿಶ್ವಭ್ರಮಣವ ಮಾಡಿ
ನಗುವೆನಾ ಆಡಿ ಹಾಡಿ
ಸವಿಸುಖದ ಕಲ್ಪನಾಕಾಶದೊಳು ಹಾರುವೆನು
ಮೋಡಗಳ ಜೋಡಿಗೂಡಿ

ಸುರಸ್ವರ್‍ಗಲೋಕದಾ ಅವರದೂತನು ನಾನು
ನನಗಿಲ್ಲ ಆಹುದು ಬಹುದು
ತಿರುಕರಲಿ ತಿರುಗಿದರು ರಾಜರ್‍ಷಿ ಬ್ರಹ್ಮರ್‍ಷಿ
ದೇವರ್‍ಷಿ ನಾನೆ ಹೌದು

ಚಿರಗಾನ ಲಹರಿಯಲಿ ಸಿರಿಬೆಡಗ ಬೆರಸುತಲಿ
ಬೆಳಸುವೆನು ಭಾವವನ್ನು
ಅರಿಯಲಾರದ ಗೂಢ ಗೀತೆಯಲ್ಲಿ ಹಾಡುವೆನು
ಭುವನದಲ್ಲಿ ಸ್ವರ್‍ಗವನ್ನು

ಝರಿಯಲ್ಲಿ ಬೆರೆಯುವೆನು ಸೇರುವೆನು ಹೂವಿನಲಿ
ನಲಿನಲಿದು ಬಾಳುತಿರುವೆ
ಬರಿಬಯಲಿನಾಕಾಶದುಡಿಯಲ್ಲಿ ಹೊಡಕರಿಸಿ
ಹಕ್ಕಿಯೊಲು ಹಾಡುತಿರುವೆ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...