ಕವಿ

ಸೌಂದರ್‍ಯಸರಸಿಯೊಳು ಕವನೀಯ ಸುಕುಮಾರ
ಸಿರಿರಾಜಹಂಸವಾಗಿ
ಇಂದು ಮೂಜಗ ಮೀರಿ ಅವರ ಗದ್ದುಗೆ ಏರಿ
ಆಳ್ವ ಅಧಿಕಾರಿಯಾಗಿ

ಋತುರಾಜ ನವತರುಣ ಮಧುವನದ ಅಭಿರಾಮ
ಮೃದು ಮಂದವಾಯುವಾಗಿ
ಅತಿರೂಪಲಾವಣ್ಯ ಅರೆದೆರೆದು ಬಿರಿಬಿರಿದ
ಅರಳು ಹೂದುಂಬಿಯಾಗಿ

ಸುರಗಂಗೆ ತೆರೆಯಾಗಿ ಕೊಚ್ಚಿಕೊಳ್ಳುವೆ ಪಾಪ
ಹರಿದು ಪಾತಾಳ ಮುಟ್ಟಿ
ಮೆರೆವ ಕವಿಕುಲಕುಮುದ ಗರ್‍ಭಸ್ಥ ನಿತ್ಯಸುಧೆ
ಸುರಿಸುರಿಸಿ ಧಾರಿಗಟ್ಟಿ

ಮಕರಂದ ಶರಸೂರೆಯಾಗಿರುವ ಮೃದುಮೃದುಲ
ಕುಸುಮ ನಲಿನಲಿಯುವಲ್ಲಿ
ಸುಕುಮಾರ ಒಳ್ಳಿಮಂಟಪದಲ್ಲಿ ಅಡಗಿ ಮೈ
ಮರೆವೆನಾನಂದದಲ್ಲಿ

ಮನ್ಮನ ಮಹಾಸಿಂಧು ತಳತನಕ ಮುಳುಗುವೆನು
ಮುತ್ತುರತ್ನಂಗಳಲ್ಲಿ
ಜನ್ಮ ಜನ್ಮದ ವಿಪುಲ ಭೋಗಭಾಂಡಾರವನು
ಒಡೆಯುವೆನು ಯೋಗದಲ್ಲಿ

ರವಿಯ ರಥವನ್ನೇರಿ ವಿಶ್ವಭ್ರಮಣವ ಮಾಡಿ
ನಗುವೆನಾ ಆಡಿ ಹಾಡಿ
ಸವಿಸುಖದ ಕಲ್ಪನಾಕಾಶದೊಳು ಹಾರುವೆನು
ಮೋಡಗಳ ಜೋಡಿಗೂಡಿ

ಸುರಸ್ವರ್‍ಗಲೋಕದಾ ಅವರದೂತನು ನಾನು
ನನಗಿಲ್ಲ ಆಹುದು ಬಹುದು
ತಿರುಕರಲಿ ತಿರುಗಿದರು ರಾಜರ್‍ಷಿ ಬ್ರಹ್ಮರ್‍ಷಿ
ದೇವರ್‍ಷಿ ನಾನೆ ಹೌದು

ಚಿರಗಾನ ಲಹರಿಯಲಿ ಸಿರಿಬೆಡಗ ಬೆರಸುತಲಿ
ಬೆಳಸುವೆನು ಭಾವವನ್ನು
ಅರಿಯಲಾರದ ಗೂಢ ಗೀತೆಯಲ್ಲಿ ಹಾಡುವೆನು
ಭುವನದಲ್ಲಿ ಸ್ವರ್‍ಗವನ್ನು

ಝರಿಯಲ್ಲಿ ಬೆರೆಯುವೆನು ಸೇರುವೆನು ಹೂವಿನಲಿ
ನಲಿನಲಿದು ಬಾಳುತಿರುವೆ
ಬರಿಬಯಲಿನಾಕಾಶದುಡಿಯಲ್ಲಿ ಹೊಡಕರಿಸಿ
ಹಕ್ಕಿಯೊಲು ಹಾಡುತಿರುವೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಕ್ಷರ ಹಾರದ ಮುತ್ತುಗಳು
Next post ಶ್ರೇಷ್ಠತೆಯ ಸವಾರಿ

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…