ಕವಿ

ಸೌಂದರ್‍ಯಸರಸಿಯೊಳು ಕವನೀಯ ಸುಕುಮಾರ
ಸಿರಿರಾಜಹಂಸವಾಗಿ
ಇಂದು ಮೂಜಗ ಮೀರಿ ಅವರ ಗದ್ದುಗೆ ಏರಿ
ಆಳ್ವ ಅಧಿಕಾರಿಯಾಗಿ

ಋತುರಾಜ ನವತರುಣ ಮಧುವನದ ಅಭಿರಾಮ
ಮೃದು ಮಂದವಾಯುವಾಗಿ
ಅತಿರೂಪಲಾವಣ್ಯ ಅರೆದೆರೆದು ಬಿರಿಬಿರಿದ
ಅರಳು ಹೂದುಂಬಿಯಾಗಿ

ಸುರಗಂಗೆ ತೆರೆಯಾಗಿ ಕೊಚ್ಚಿಕೊಳ್ಳುವೆ ಪಾಪ
ಹರಿದು ಪಾತಾಳ ಮುಟ್ಟಿ
ಮೆರೆವ ಕವಿಕುಲಕುಮುದ ಗರ್‍ಭಸ್ಥ ನಿತ್ಯಸುಧೆ
ಸುರಿಸುರಿಸಿ ಧಾರಿಗಟ್ಟಿ

ಮಕರಂದ ಶರಸೂರೆಯಾಗಿರುವ ಮೃದುಮೃದುಲ
ಕುಸುಮ ನಲಿನಲಿಯುವಲ್ಲಿ
ಸುಕುಮಾರ ಒಳ್ಳಿಮಂಟಪದಲ್ಲಿ ಅಡಗಿ ಮೈ
ಮರೆವೆನಾನಂದದಲ್ಲಿ

ಮನ್ಮನ ಮಹಾಸಿಂಧು ತಳತನಕ ಮುಳುಗುವೆನು
ಮುತ್ತುರತ್ನಂಗಳಲ್ಲಿ
ಜನ್ಮ ಜನ್ಮದ ವಿಪುಲ ಭೋಗಭಾಂಡಾರವನು
ಒಡೆಯುವೆನು ಯೋಗದಲ್ಲಿ

ರವಿಯ ರಥವನ್ನೇರಿ ವಿಶ್ವಭ್ರಮಣವ ಮಾಡಿ
ನಗುವೆನಾ ಆಡಿ ಹಾಡಿ
ಸವಿಸುಖದ ಕಲ್ಪನಾಕಾಶದೊಳು ಹಾರುವೆನು
ಮೋಡಗಳ ಜೋಡಿಗೂಡಿ

ಸುರಸ್ವರ್‍ಗಲೋಕದಾ ಅವರದೂತನು ನಾನು
ನನಗಿಲ್ಲ ಆಹುದು ಬಹುದು
ತಿರುಕರಲಿ ತಿರುಗಿದರು ರಾಜರ್‍ಷಿ ಬ್ರಹ್ಮರ್‍ಷಿ
ದೇವರ್‍ಷಿ ನಾನೆ ಹೌದು

ಚಿರಗಾನ ಲಹರಿಯಲಿ ಸಿರಿಬೆಡಗ ಬೆರಸುತಲಿ
ಬೆಳಸುವೆನು ಭಾವವನ್ನು
ಅರಿಯಲಾರದ ಗೂಢ ಗೀತೆಯಲ್ಲಿ ಹಾಡುವೆನು
ಭುವನದಲ್ಲಿ ಸ್ವರ್‍ಗವನ್ನು

ಝರಿಯಲ್ಲಿ ಬೆರೆಯುವೆನು ಸೇರುವೆನು ಹೂವಿನಲಿ
ನಲಿನಲಿದು ಬಾಳುತಿರುವೆ
ಬರಿಬಯಲಿನಾಕಾಶದುಡಿಯಲ್ಲಿ ಹೊಡಕರಿಸಿ
ಹಕ್ಕಿಯೊಲು ಹಾಡುತಿರುವೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಕ್ಷರ ಹಾರದ ಮುತ್ತುಗಳು
Next post ಶ್ರೇಷ್ಠತೆಯ ಸವಾರಿ

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…