Home / ಕವನ / ಕವಿತೆ / ಅಂತರಾರಾಮ

ಅಂತರಾರಾಮ

ಹೃದಯದಾಕಾಶವಿದು ಅದುರಿ ಗಡ ಗದ್ದರಿಸಿ
ಪ್ರೇಮವಂಕುರಿಸಿ ಸೌರಭವು ಹಾರಿ
ಭೇದಿಸುತ ಸಪ್ತತಲ ಇಂದ್ರಚಂದ್ರರ ಲೋಕ
ಪಾರ ಅಪರಂಪಾರ ದೂರ ಸೇರಿ

ಆವ ಲೋಕವ ಕಾಣೆ-ದಿವ್ಯಜ್ಯೋತಿಯ ಕಂಡೆ
ಕಣ್ಣರಳಿ ಬಂತಾಗ ಭವ್ಯದೃಷ್ಟಿ
ಆವ ಆಶೆಯ ಪಾಶವೆಸಗಿಲ್ಲ ಬಿರುಗಾಳಿ
ಬೀಸಿ ಸೂಸಿತು ಈ ಪ್ರಕಾಶವೃಷ್ಟಿ

ನಲ್ಲನಲ್ಲೆಯ ಪ್ರೇಮ ಬಲ್ಲೆನೆಂಬುವ ಬಿರುದು
ಹದಿನಾಲ್ಕು ಲೋಕಕ್ಕೆ ತಟ್ಟಿಮುಟ್ಟಿ
ಎಲ್ಲೆಡೆಗೆ ವ್ಯಾಪಿಸಿತು ಬೆಳ್ಳಬೆಳು ಬೆಳಕಾಗಿ
ನನ್ನಲ್ಲೆ ಆ ಕಳೆಯ ಮೊಳಕೆ ಹುಟ್ಟಿ

ಉರಿದುರಿದು ಉರಿದೆದ್ದ ಆ ಊರ್‍ಮೆಯುರಿಯಲ್ಲಿ
ಒಂದಾಗಿ ಸದಾ ಸವಿಯನುಂಡೆ
ಸುರರು ಸುರಗುರು ಸೂರ್ಯಚಂದ್ರರೂ ಕಾಣದಾ
ಬೆಳಕಿನುನ್ಮಾದದಾ ಕಾಂತಿ ಕಂಡೆ

ಪ್ರೇಮದಾಚೆಯ ಊರ್‍ಮೆ ಪ್ರೇಮಕ್ಕೆ ಬೀಜವದು
ಪ್ರೇಮದಾ ಫಲವಾಗಿ ಫಲಿಸಿ ನಿಂದು
ಉಮ್ಮಳಿಸಿ ತನ್ಮಯತೆ ಪಾವಿತ್ರ್ಯ ಪರವಶತೆ
ಪರದೆಗಳ ಹರಿಹರಿದು ಸುಳಿದು ಬಂದು

ವೇದಶಾಸ್ತ್ರ ಪುರಾಣ ವರ ಕುರಾನಗಳೆಲ್ಲ
ಕುಣಿಕುಣಿದು ನನ್ನ ಊರ್‍ಮೆಯೊಳೆ ಹುಟ್ಟಿ
ಅಡಗಿಹವು ಇಡಗಿಹವು ಎಲ್ಲೆಡೆಗೆ ನುಡಿಯುವವು
ಊರ್‍ಮೆಕೂರ್‍ಮೆಯೆ ಭವ್ಯದಿವ್ಯ ಸೃಷ್ಟಿ

ಮರವು ಮತ್ಸರ ಕರಗಿ ಕಷ್ಟನಷ್ಟವು ಸುಟ್ಟು
ಭರದಿ ಭಸ್ಮಿಭೂತವಾಗಿ ಹಾರಿ
ಅರವು ಅಗಲಾಗಿ ಅದ್ಭುತದ ಅಘಟಿತ ಶಕ್ತಿ
ಹೆಡಕರಿಸಿ ಹೊಳೆದು ಕುಡಿಮಿಂಚುದೋರಿ

ಘನಸಿರಿಯ ಚಿನ್ಮಯ ಚಿದಾನಂದವನು ಕಂಡೆ
ಹೊರಮರೆದು ಒಳ ಉರ್‍ಮೆ ಕುದುರೆ ಏರಿ
ನೆನಪುದೋರಿತು ಇತ್ತ ಕನಸು ಹರಿಯಿತು ಅತ್ತ
ಹತ್ತುತಾಸಿನ ಹಿಗ್ಗು ಹಾಡನೇರಿ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...