Home / ಕವನ / ಕವಿತೆ / ಅಂತರಾರಾಮ

ಅಂತರಾರಾಮ

ಹೃದಯದಾಕಾಶವಿದು ಅದುರಿ ಗಡ ಗದ್ದರಿಸಿ
ಪ್ರೇಮವಂಕುರಿಸಿ ಸೌರಭವು ಹಾರಿ
ಭೇದಿಸುತ ಸಪ್ತತಲ ಇಂದ್ರಚಂದ್ರರ ಲೋಕ
ಪಾರ ಅಪರಂಪಾರ ದೂರ ಸೇರಿ

ಆವ ಲೋಕವ ಕಾಣೆ-ದಿವ್ಯಜ್ಯೋತಿಯ ಕಂಡೆ
ಕಣ್ಣರಳಿ ಬಂತಾಗ ಭವ್ಯದೃಷ್ಟಿ
ಆವ ಆಶೆಯ ಪಾಶವೆಸಗಿಲ್ಲ ಬಿರುಗಾಳಿ
ಬೀಸಿ ಸೂಸಿತು ಈ ಪ್ರಕಾಶವೃಷ್ಟಿ

ನಲ್ಲನಲ್ಲೆಯ ಪ್ರೇಮ ಬಲ್ಲೆನೆಂಬುವ ಬಿರುದು
ಹದಿನಾಲ್ಕು ಲೋಕಕ್ಕೆ ತಟ್ಟಿಮುಟ್ಟಿ
ಎಲ್ಲೆಡೆಗೆ ವ್ಯಾಪಿಸಿತು ಬೆಳ್ಳಬೆಳು ಬೆಳಕಾಗಿ
ನನ್ನಲ್ಲೆ ಆ ಕಳೆಯ ಮೊಳಕೆ ಹುಟ್ಟಿ

ಉರಿದುರಿದು ಉರಿದೆದ್ದ ಆ ಊರ್‍ಮೆಯುರಿಯಲ್ಲಿ
ಒಂದಾಗಿ ಸದಾ ಸವಿಯನುಂಡೆ
ಸುರರು ಸುರಗುರು ಸೂರ್ಯಚಂದ್ರರೂ ಕಾಣದಾ
ಬೆಳಕಿನುನ್ಮಾದದಾ ಕಾಂತಿ ಕಂಡೆ

ಪ್ರೇಮದಾಚೆಯ ಊರ್‍ಮೆ ಪ್ರೇಮಕ್ಕೆ ಬೀಜವದು
ಪ್ರೇಮದಾ ಫಲವಾಗಿ ಫಲಿಸಿ ನಿಂದು
ಉಮ್ಮಳಿಸಿ ತನ್ಮಯತೆ ಪಾವಿತ್ರ್ಯ ಪರವಶತೆ
ಪರದೆಗಳ ಹರಿಹರಿದು ಸುಳಿದು ಬಂದು

ವೇದಶಾಸ್ತ್ರ ಪುರಾಣ ವರ ಕುರಾನಗಳೆಲ್ಲ
ಕುಣಿಕುಣಿದು ನನ್ನ ಊರ್‍ಮೆಯೊಳೆ ಹುಟ್ಟಿ
ಅಡಗಿಹವು ಇಡಗಿಹವು ಎಲ್ಲೆಡೆಗೆ ನುಡಿಯುವವು
ಊರ್‍ಮೆಕೂರ್‍ಮೆಯೆ ಭವ್ಯದಿವ್ಯ ಸೃಷ್ಟಿ

ಮರವು ಮತ್ಸರ ಕರಗಿ ಕಷ್ಟನಷ್ಟವು ಸುಟ್ಟು
ಭರದಿ ಭಸ್ಮಿಭೂತವಾಗಿ ಹಾರಿ
ಅರವು ಅಗಲಾಗಿ ಅದ್ಭುತದ ಅಘಟಿತ ಶಕ್ತಿ
ಹೆಡಕರಿಸಿ ಹೊಳೆದು ಕುಡಿಮಿಂಚುದೋರಿ

ಘನಸಿರಿಯ ಚಿನ್ಮಯ ಚಿದಾನಂದವನು ಕಂಡೆ
ಹೊರಮರೆದು ಒಳ ಉರ್‍ಮೆ ಕುದುರೆ ಏರಿ
ನೆನಪುದೋರಿತು ಇತ್ತ ಕನಸು ಹರಿಯಿತು ಅತ್ತ
ಹತ್ತುತಾಸಿನ ಹಿಗ್ಗು ಹಾಡನೇರಿ
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...