ಅಂತರಾರಾಮ

ಹೃದಯದಾಕಾಶವಿದು ಅದುರಿ ಗಡ ಗದ್ದರಿಸಿ
ಪ್ರೇಮವಂಕುರಿಸಿ ಸೌರಭವು ಹಾರಿ
ಭೇದಿಸುತ ಸಪ್ತತಲ ಇಂದ್ರಚಂದ್ರರ ಲೋಕ
ಪಾರ ಅಪರಂಪಾರ ದೂರ ಸೇರಿ

ಆವ ಲೋಕವ ಕಾಣೆ-ದಿವ್ಯಜ್ಯೋತಿಯ ಕಂಡೆ
ಕಣ್ಣರಳಿ ಬಂತಾಗ ಭವ್ಯದೃಷ್ಟಿ
ಆವ ಆಶೆಯ ಪಾಶವೆಸಗಿಲ್ಲ ಬಿರುಗಾಳಿ
ಬೀಸಿ ಸೂಸಿತು ಈ ಪ್ರಕಾಶವೃಷ್ಟಿ

ನಲ್ಲನಲ್ಲೆಯ ಪ್ರೇಮ ಬಲ್ಲೆನೆಂಬುವ ಬಿರುದು
ಹದಿನಾಲ್ಕು ಲೋಕಕ್ಕೆ ತಟ್ಟಿಮುಟ್ಟಿ
ಎಲ್ಲೆಡೆಗೆ ವ್ಯಾಪಿಸಿತು ಬೆಳ್ಳಬೆಳು ಬೆಳಕಾಗಿ
ನನ್ನಲ್ಲೆ ಆ ಕಳೆಯ ಮೊಳಕೆ ಹುಟ್ಟಿ

ಉರಿದುರಿದು ಉರಿದೆದ್ದ ಆ ಊರ್‍ಮೆಯುರಿಯಲ್ಲಿ
ಒಂದಾಗಿ ಸದಾ ಸವಿಯನುಂಡೆ
ಸುರರು ಸುರಗುರು ಸೂರ್ಯಚಂದ್ರರೂ ಕಾಣದಾ
ಬೆಳಕಿನುನ್ಮಾದದಾ ಕಾಂತಿ ಕಂಡೆ

ಪ್ರೇಮದಾಚೆಯ ಊರ್‍ಮೆ ಪ್ರೇಮಕ್ಕೆ ಬೀಜವದು
ಪ್ರೇಮದಾ ಫಲವಾಗಿ ಫಲಿಸಿ ನಿಂದು
ಉಮ್ಮಳಿಸಿ ತನ್ಮಯತೆ ಪಾವಿತ್ರ್ಯ ಪರವಶತೆ
ಪರದೆಗಳ ಹರಿಹರಿದು ಸುಳಿದು ಬಂದು

ವೇದಶಾಸ್ತ್ರ ಪುರಾಣ ವರ ಕುರಾನಗಳೆಲ್ಲ
ಕುಣಿಕುಣಿದು ನನ್ನ ಊರ್‍ಮೆಯೊಳೆ ಹುಟ್ಟಿ
ಅಡಗಿಹವು ಇಡಗಿಹವು ಎಲ್ಲೆಡೆಗೆ ನುಡಿಯುವವು
ಊರ್‍ಮೆಕೂರ್‍ಮೆಯೆ ಭವ್ಯದಿವ್ಯ ಸೃಷ್ಟಿ

ಮರವು ಮತ್ಸರ ಕರಗಿ ಕಷ್ಟನಷ್ಟವು ಸುಟ್ಟು
ಭರದಿ ಭಸ್ಮಿಭೂತವಾಗಿ ಹಾರಿ
ಅರವು ಅಗಲಾಗಿ ಅದ್ಭುತದ ಅಘಟಿತ ಶಕ್ತಿ
ಹೆಡಕರಿಸಿ ಹೊಳೆದು ಕುಡಿಮಿಂಚುದೋರಿ

ಘನಸಿರಿಯ ಚಿನ್ಮಯ ಚಿದಾನಂದವನು ಕಂಡೆ
ಹೊರಮರೆದು ಒಳ ಉರ್‍ಮೆ ಕುದುರೆ ಏರಿ
ನೆನಪುದೋರಿತು ಇತ್ತ ಕನಸು ಹರಿಯಿತು ಅತ್ತ
ಹತ್ತುತಾಸಿನ ಹಿಗ್ಗು ಹಾಡನೇರಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೇಗಿಲು
Next post ಭವಿಷ್ಯದ ಚಿಂತೆ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…