ನಾಳಿನ ಮಗು

ಫಲದ ನಿರ್‍ಣಯವು ಏನು ಆದರೂ ಕ್ಷುಬ್ಧನಾಗನವನು
ನೇರಾದ ರೀತಿ ರುಜು ಅವನ ನೀತಿ, ಸಿದ್ಧಿಸದೆ ಇದ್ದರೂನು
ತನ್ನ ಯೋಗ್ಯತೆಗೆ ತಕ್ಕ ರೀತಿಯಲಿ ಕರ್‍ಮಕುಶಲನಾಗಿ
ಸತ್ಯವನ್ನೆ ಸಾರುವನು ಜಗಕೆ ನಿರ್‍ಭೀತ ಧೀರನಾಗಿ.

ಫಲವೆಂದೆ ಬರಲಿ ಯುಗಯುಗವು ತಾಳಿ ಎದೆಗೆಡದೆ ಇರುವನಾತ
ಗೊಣಗುಡದೆ ಅವನು ಅವಘಡವ ಸಹಿಸಿ ಎದುರಿಸುವ ವೀರಜಾತ
ಸಡಲಿಸನು ಅವನು ಹವಣಿಕೆಯ ಹಿಡಿತ ಶತಕಾನುಶತಕವಾಗಿ
ಸಿದ್ಧಿಸಲಿ ಬಿಡಲಿ ಸಮತೆಯನು ಕಳೆದುಕೊಳನಾತ ಸಾಮ್ಯಯೋಗಿ.

ಅಪಜಯವು ಬರಲಿ ಕೊನೆ ವಿಜಯವಿಹುದು ಎನುತೆನುತ ಯುದ್ದವೆಸಗಿ
ಮೊಗದಲ್ಲಿ ನಗೆಯು, ಎದೆ ಸೊಗದ ಬಗೆಯು, ಸ್ಥಿತಿ ಬರಲಿ ಎಂತೊ ಮಸಗಿ
ಪರಗುಣದ ರಸಿಕ ಸಹಕಾರಿಯವನು ಸತ್ಕೃತ್ಯವೆಲ್ಲಕೂನು
ಸಂಯಮದಿ ಬದ್ಧ ಪ್ರಾಮಾಣ್ಯಸಿದ್ಧ ಹೀಗಿರಲು ಬೇಕು ಮಗುವು.
ಅವನಲ್ಲಿ ದಿವ್ಯಜ್ಯೋತಿಗಳ ಉದಯ ತೋರುವದು ಬರುವ ಯುಗವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅತೃಪ್ತಿ
Next post ವಾಗ್ದೇವಿ – ೨೭

ಸಣ್ಣ ಕತೆ

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ರಾಜಕೀಯ ಮುಖಂಡರು

    ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…