ನಾಳಿನ ಮಗು

ಫಲದ ನಿರ್‍ಣಯವು ಏನು ಆದರೂ ಕ್ಷುಬ್ಧನಾಗನವನು
ನೇರಾದ ರೀತಿ ರುಜು ಅವನ ನೀತಿ, ಸಿದ್ಧಿಸದೆ ಇದ್ದರೂನು
ತನ್ನ ಯೋಗ್ಯತೆಗೆ ತಕ್ಕ ರೀತಿಯಲಿ ಕರ್‍ಮಕುಶಲನಾಗಿ
ಸತ್ಯವನ್ನೆ ಸಾರುವನು ಜಗಕೆ ನಿರ್‍ಭೀತ ಧೀರನಾಗಿ.

ಫಲವೆಂದೆ ಬರಲಿ ಯುಗಯುಗವು ತಾಳಿ ಎದೆಗೆಡದೆ ಇರುವನಾತ
ಗೊಣಗುಡದೆ ಅವನು ಅವಘಡವ ಸಹಿಸಿ ಎದುರಿಸುವ ವೀರಜಾತ
ಸಡಲಿಸನು ಅವನು ಹವಣಿಕೆಯ ಹಿಡಿತ ಶತಕಾನುಶತಕವಾಗಿ
ಸಿದ್ಧಿಸಲಿ ಬಿಡಲಿ ಸಮತೆಯನು ಕಳೆದುಕೊಳನಾತ ಸಾಮ್ಯಯೋಗಿ.

ಅಪಜಯವು ಬರಲಿ ಕೊನೆ ವಿಜಯವಿಹುದು ಎನುತೆನುತ ಯುದ್ದವೆಸಗಿ
ಮೊಗದಲ್ಲಿ ನಗೆಯು, ಎದೆ ಸೊಗದ ಬಗೆಯು, ಸ್ಥಿತಿ ಬರಲಿ ಎಂತೊ ಮಸಗಿ
ಪರಗುಣದ ರಸಿಕ ಸಹಕಾರಿಯವನು ಸತ್ಕೃತ್ಯವೆಲ್ಲಕೂನು
ಸಂಯಮದಿ ಬದ್ಧ ಪ್ರಾಮಾಣ್ಯಸಿದ್ಧ ಹೀಗಿರಲು ಬೇಕು ಮಗುವು.
ಅವನಲ್ಲಿ ದಿವ್ಯಜ್ಯೋತಿಗಳ ಉದಯ ತೋರುವದು ಬರುವ ಯುಗವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅತೃಪ್ತಿ
Next post ವಾಗ್ದೇವಿ – ೨೭

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

cheap jordans|wholesale air max|wholesale jordans|wholesale jewelry|wholesale jerseys