ವಿದ್ಯುತ್‌ಪುತ್ರನ ಅವತಾರ

ಸುಸಮರ್‍ಥನಾದ ವಿದ್ಯುತ್‌ ಪುತ್ರನೊಬ್ಬ ತಾನೀ ಭೂಮಿಗಿಳಿದು ಬಂದ
ಅಪ್ರತಿಮ ತ್ವರಿತಗತಿ ಅಗ್ನಿ-ಪಾದಗಳಿಂದ.
ಮಾನವನ ಮೈ ಕಟ್ಟು ಘನಗರ್‍ಜನೆಯ ತೊಟ್ಟು,
ನರಗರ್‍ಭದಲ್ಲಿ ಹುಟ್ಟಿತ್ತು ಬೆಳಕು.

ಸ್ವರ್‍ಗದತಿ ಶಾಂತಗತಿ, ಮಹಿಮೆಯಾ ಮಾಧುರ್‍ಯ, ಪರಿಶುದ್ಧರಾಗ
ಗರಿಗೊಂಡ ಬಲ ಇಳಿದು ಬಂದವಾಗ.
ಎಲ್ಲ ದೇವತೆಗಳೂ ಒಂದೆ ಮರ್‍ತ್ಯ ಶರೀರದಲ್ಲಿ ಬಾಳಿದವು
ಒಂದೇ ಹೆಸರ ತಾಳಿದವು.

ಅಗಲಗಲ ಗತಿಯ ಅಲೆ ಮಸಕು ಭೂಮಂಡಲದಿ ಬಂತು ಬಳಲಿ
ಉತ್ಫುಲ್ಲಸ್ವಪ್ನೋತ್ಥಗುಂಫಗಳಲಿ.
ಭವ್ಯತೆಯ ಕರುವಿಟ್ಟ ಹಾಗೆ ಬಾಳಾಗಿತ್ತು
ಕಡಲಗಲ ಕೈ ಕಾಲ-ಚಕ್ರ ಅಮುಕಿತ್ತು.

ಮಾನವನ ಆತ್ಮ ಮತ್ತೊಮ್ಮೆ ಪಡೆದಿತು ಬಾಳ ಸಾರಥ್ಯ
ಧೀರ ಉದ್ಧತ ದೇವದೇವತೆಗಳಾತಿಥ್ಯ.
ಪ್ರಪ್ರಭಂಜನ ಪಕ್ಷ ಉತ್‌ಕ್ಷಿಪ್ತ ವಾಯುಪಥದಲ್ಲಿ ಹಾರಿತ್ತು
ಭವ್ಯ ಆದರ್‍ಶಕ್ಕೆ ಗುರಿಯಿಟ್ಟು ಎಸೆದ ಈಟಿಯ ಹಾಗೆ ಏರಿತ್ತು.

ಡೆಂಡಣಿಸಿ ಕಳಚಿ ಬಿದ್ದವು ಪುರಾತನಾಯಸ ಕವಚ
ಗೋಡೆ ಸಿಡಿದೊಡೆದು ಬಿದ್ದಿತು ಪುರಾಣ ಪ್ರಕೃತಿ
ತರುಣತರ ಸೌಂದರ್‍ಯ, ಸುವಿಚಾರ, ಸುಪ್ರಭೆಯ ಜಗದಿ
ಹೊಕ್ಕ ದೇವನು ಮತ್ತೆ ತನ್ನ ಹೊಸತನದಿ.

ಮೂಡಿತ್ತು ದೇವವಾಣಿಯ ಸೊಲ್ಲು ಮಾನವರ ತುಟಿಯಲ್ಲು
ಹೃದಯ ಎಚ್ಚತ್ತಿತ್ತು ಮಿಂಚು ಬೆಡಗಿನ ಬಿಳಿಯ ನಸುಕುಗಳಲು
ಗಾಳಿ ಬೆಳಕಿನ ಬಟ್ಟೆ, ಉಸಿರು ಹರ್‍ಷದ ಕುಸರು
ದೇವಲೀಲೆಯ ಆಟದಂತೆ ಬಾಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಗಲಿಕೆ
Next post ವಾಗ್ದೇವಿ – ೨೮

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…