Home / ಕವನ / ಕವಿತೆ / ವಿದ್ಯುತ್‌ಪುತ್ರನ ಅವತಾರ

ವಿದ್ಯುತ್‌ಪುತ್ರನ ಅವತಾರ

ಸುಸಮರ್‍ಥನಾದ ವಿದ್ಯುತ್‌ ಪುತ್ರನೊಬ್ಬ ತಾನೀ ಭೂಮಿಗಿಳಿದು ಬಂದ
ಅಪ್ರತಿಮ ತ್ವರಿತಗತಿ ಅಗ್ನಿ-ಪಾದಗಳಿಂದ.
ಮಾನವನ ಮೈ ಕಟ್ಟು ಘನಗರ್‍ಜನೆಯ ತೊಟ್ಟು,
ನರಗರ್‍ಭದಲ್ಲಿ ಹುಟ್ಟಿತ್ತು ಬೆಳಕು.

ಸ್ವರ್‍ಗದತಿ ಶಾಂತಗತಿ, ಮಹಿಮೆಯಾ ಮಾಧುರ್‍ಯ, ಪರಿಶುದ್ಧರಾಗ
ಗರಿಗೊಂಡ ಬಲ ಇಳಿದು ಬಂದವಾಗ.
ಎಲ್ಲ ದೇವತೆಗಳೂ ಒಂದೆ ಮರ್‍ತ್ಯ ಶರೀರದಲ್ಲಿ ಬಾಳಿದವು
ಒಂದೇ ಹೆಸರ ತಾಳಿದವು.

ಅಗಲಗಲ ಗತಿಯ ಅಲೆ ಮಸಕು ಭೂಮಂಡಲದಿ ಬಂತು ಬಳಲಿ
ಉತ್ಫುಲ್ಲಸ್ವಪ್ನೋತ್ಥಗುಂಫಗಳಲಿ.
ಭವ್ಯತೆಯ ಕರುವಿಟ್ಟ ಹಾಗೆ ಬಾಳಾಗಿತ್ತು
ಕಡಲಗಲ ಕೈ ಕಾಲ-ಚಕ್ರ ಅಮುಕಿತ್ತು.

ಮಾನವನ ಆತ್ಮ ಮತ್ತೊಮ್ಮೆ ಪಡೆದಿತು ಬಾಳ ಸಾರಥ್ಯ
ಧೀರ ಉದ್ಧತ ದೇವದೇವತೆಗಳಾತಿಥ್ಯ.
ಪ್ರಪ್ರಭಂಜನ ಪಕ್ಷ ಉತ್‌ಕ್ಷಿಪ್ತ ವಾಯುಪಥದಲ್ಲಿ ಹಾರಿತ್ತು
ಭವ್ಯ ಆದರ್‍ಶಕ್ಕೆ ಗುರಿಯಿಟ್ಟು ಎಸೆದ ಈಟಿಯ ಹಾಗೆ ಏರಿತ್ತು.

ಡೆಂಡಣಿಸಿ ಕಳಚಿ ಬಿದ್ದವು ಪುರಾತನಾಯಸ ಕವಚ
ಗೋಡೆ ಸಿಡಿದೊಡೆದು ಬಿದ್ದಿತು ಪುರಾಣ ಪ್ರಕೃತಿ
ತರುಣತರ ಸೌಂದರ್‍ಯ, ಸುವಿಚಾರ, ಸುಪ್ರಭೆಯ ಜಗದಿ
ಹೊಕ್ಕ ದೇವನು ಮತ್ತೆ ತನ್ನ ಹೊಸತನದಿ.

ಮೂಡಿತ್ತು ದೇವವಾಣಿಯ ಸೊಲ್ಲು ಮಾನವರ ತುಟಿಯಲ್ಲು
ಹೃದಯ ಎಚ್ಚತ್ತಿತ್ತು ಮಿಂಚು ಬೆಡಗಿನ ಬಿಳಿಯ ನಸುಕುಗಳಲು
ಗಾಳಿ ಬೆಳಕಿನ ಬಟ್ಟೆ, ಉಸಿರು ಹರ್‍ಷದ ಕುಸರು
ದೇವಲೀಲೆಯ ಆಟದಂತೆ ಬಾಳು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...