ವಿದ್ಯುತ್‌ಪುತ್ರನ ಅವತಾರ

ಸುಸಮರ್‍ಥನಾದ ವಿದ್ಯುತ್‌ ಪುತ್ರನೊಬ್ಬ ತಾನೀ ಭೂಮಿಗಿಳಿದು ಬಂದ
ಅಪ್ರತಿಮ ತ್ವರಿತಗತಿ ಅಗ್ನಿ-ಪಾದಗಳಿಂದ.
ಮಾನವನ ಮೈ ಕಟ್ಟು ಘನಗರ್‍ಜನೆಯ ತೊಟ್ಟು,
ನರಗರ್‍ಭದಲ್ಲಿ ಹುಟ್ಟಿತ್ತು ಬೆಳಕು.

ಸ್ವರ್‍ಗದತಿ ಶಾಂತಗತಿ, ಮಹಿಮೆಯಾ ಮಾಧುರ್‍ಯ, ಪರಿಶುದ್ಧರಾಗ
ಗರಿಗೊಂಡ ಬಲ ಇಳಿದು ಬಂದವಾಗ.
ಎಲ್ಲ ದೇವತೆಗಳೂ ಒಂದೆ ಮರ್‍ತ್ಯ ಶರೀರದಲ್ಲಿ ಬಾಳಿದವು
ಒಂದೇ ಹೆಸರ ತಾಳಿದವು.

ಅಗಲಗಲ ಗತಿಯ ಅಲೆ ಮಸಕು ಭೂಮಂಡಲದಿ ಬಂತು ಬಳಲಿ
ಉತ್ಫುಲ್ಲಸ್ವಪ್ನೋತ್ಥಗುಂಫಗಳಲಿ.
ಭವ್ಯತೆಯ ಕರುವಿಟ್ಟ ಹಾಗೆ ಬಾಳಾಗಿತ್ತು
ಕಡಲಗಲ ಕೈ ಕಾಲ-ಚಕ್ರ ಅಮುಕಿತ್ತು.

ಮಾನವನ ಆತ್ಮ ಮತ್ತೊಮ್ಮೆ ಪಡೆದಿತು ಬಾಳ ಸಾರಥ್ಯ
ಧೀರ ಉದ್ಧತ ದೇವದೇವತೆಗಳಾತಿಥ್ಯ.
ಪ್ರಪ್ರಭಂಜನ ಪಕ್ಷ ಉತ್‌ಕ್ಷಿಪ್ತ ವಾಯುಪಥದಲ್ಲಿ ಹಾರಿತ್ತು
ಭವ್ಯ ಆದರ್‍ಶಕ್ಕೆ ಗುರಿಯಿಟ್ಟು ಎಸೆದ ಈಟಿಯ ಹಾಗೆ ಏರಿತ್ತು.

ಡೆಂಡಣಿಸಿ ಕಳಚಿ ಬಿದ್ದವು ಪುರಾತನಾಯಸ ಕವಚ
ಗೋಡೆ ಸಿಡಿದೊಡೆದು ಬಿದ್ದಿತು ಪುರಾಣ ಪ್ರಕೃತಿ
ತರುಣತರ ಸೌಂದರ್‍ಯ, ಸುವಿಚಾರ, ಸುಪ್ರಭೆಯ ಜಗದಿ
ಹೊಕ್ಕ ದೇವನು ಮತ್ತೆ ತನ್ನ ಹೊಸತನದಿ.

ಮೂಡಿತ್ತು ದೇವವಾಣಿಯ ಸೊಲ್ಲು ಮಾನವರ ತುಟಿಯಲ್ಲು
ಹೃದಯ ಎಚ್ಚತ್ತಿತ್ತು ಮಿಂಚು ಬೆಡಗಿನ ಬಿಳಿಯ ನಸುಕುಗಳಲು
ಗಾಳಿ ಬೆಳಕಿನ ಬಟ್ಟೆ, ಉಸಿರು ಹರ್‍ಷದ ಕುಸರು
ದೇವಲೀಲೆಯ ಆಟದಂತೆ ಬಾಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಗಲಿಕೆ
Next post ವಾಗ್ದೇವಿ – ೨೮

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…