Home / ಕವನ / ಕವಿತೆ / ವಿದ್ಯುತ್‌ಪುತ್ರನ ಅವತಾರ

ವಿದ್ಯುತ್‌ಪುತ್ರನ ಅವತಾರ

ಸುಸಮರ್‍ಥನಾದ ವಿದ್ಯುತ್‌ ಪುತ್ರನೊಬ್ಬ ತಾನೀ ಭೂಮಿಗಿಳಿದು ಬಂದ
ಅಪ್ರತಿಮ ತ್ವರಿತಗತಿ ಅಗ್ನಿ-ಪಾದಗಳಿಂದ.
ಮಾನವನ ಮೈ ಕಟ್ಟು ಘನಗರ್‍ಜನೆಯ ತೊಟ್ಟು,
ನರಗರ್‍ಭದಲ್ಲಿ ಹುಟ್ಟಿತ್ತು ಬೆಳಕು.

ಸ್ವರ್‍ಗದತಿ ಶಾಂತಗತಿ, ಮಹಿಮೆಯಾ ಮಾಧುರ್‍ಯ, ಪರಿಶುದ್ಧರಾಗ
ಗರಿಗೊಂಡ ಬಲ ಇಳಿದು ಬಂದವಾಗ.
ಎಲ್ಲ ದೇವತೆಗಳೂ ಒಂದೆ ಮರ್‍ತ್ಯ ಶರೀರದಲ್ಲಿ ಬಾಳಿದವು
ಒಂದೇ ಹೆಸರ ತಾಳಿದವು.

ಅಗಲಗಲ ಗತಿಯ ಅಲೆ ಮಸಕು ಭೂಮಂಡಲದಿ ಬಂತು ಬಳಲಿ
ಉತ್ಫುಲ್ಲಸ್ವಪ್ನೋತ್ಥಗುಂಫಗಳಲಿ.
ಭವ್ಯತೆಯ ಕರುವಿಟ್ಟ ಹಾಗೆ ಬಾಳಾಗಿತ್ತು
ಕಡಲಗಲ ಕೈ ಕಾಲ-ಚಕ್ರ ಅಮುಕಿತ್ತು.

ಮಾನವನ ಆತ್ಮ ಮತ್ತೊಮ್ಮೆ ಪಡೆದಿತು ಬಾಳ ಸಾರಥ್ಯ
ಧೀರ ಉದ್ಧತ ದೇವದೇವತೆಗಳಾತಿಥ್ಯ.
ಪ್ರಪ್ರಭಂಜನ ಪಕ್ಷ ಉತ್‌ಕ್ಷಿಪ್ತ ವಾಯುಪಥದಲ್ಲಿ ಹಾರಿತ್ತು
ಭವ್ಯ ಆದರ್‍ಶಕ್ಕೆ ಗುರಿಯಿಟ್ಟು ಎಸೆದ ಈಟಿಯ ಹಾಗೆ ಏರಿತ್ತು.

ಡೆಂಡಣಿಸಿ ಕಳಚಿ ಬಿದ್ದವು ಪುರಾತನಾಯಸ ಕವಚ
ಗೋಡೆ ಸಿಡಿದೊಡೆದು ಬಿದ್ದಿತು ಪುರಾಣ ಪ್ರಕೃತಿ
ತರುಣತರ ಸೌಂದರ್‍ಯ, ಸುವಿಚಾರ, ಸುಪ್ರಭೆಯ ಜಗದಿ
ಹೊಕ್ಕ ದೇವನು ಮತ್ತೆ ತನ್ನ ಹೊಸತನದಿ.

ಮೂಡಿತ್ತು ದೇವವಾಣಿಯ ಸೊಲ್ಲು ಮಾನವರ ತುಟಿಯಲ್ಲು
ಹೃದಯ ಎಚ್ಚತ್ತಿತ್ತು ಮಿಂಚು ಬೆಡಗಿನ ಬಿಳಿಯ ನಸುಕುಗಳಲು
ಗಾಳಿ ಬೆಳಕಿನ ಬಟ್ಟೆ, ಉಸಿರು ಹರ್‍ಷದ ಕುಸರು
ದೇವಲೀಲೆಯ ಆಟದಂತೆ ಬಾಳು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...