Home / ಕವನ / ಕವಿತೆ / ವಿದ್ಯುತ್‌ಪುತ್ರನ ಅವತಾರ

ವಿದ್ಯುತ್‌ಪುತ್ರನ ಅವತಾರ

ಸುಸಮರ್‍ಥನಾದ ವಿದ್ಯುತ್‌ ಪುತ್ರನೊಬ್ಬ ತಾನೀ ಭೂಮಿಗಿಳಿದು ಬಂದ
ಅಪ್ರತಿಮ ತ್ವರಿತಗತಿ ಅಗ್ನಿ-ಪಾದಗಳಿಂದ.
ಮಾನವನ ಮೈ ಕಟ್ಟು ಘನಗರ್‍ಜನೆಯ ತೊಟ್ಟು,
ನರಗರ್‍ಭದಲ್ಲಿ ಹುಟ್ಟಿತ್ತು ಬೆಳಕು.

ಸ್ವರ್‍ಗದತಿ ಶಾಂತಗತಿ, ಮಹಿಮೆಯಾ ಮಾಧುರ್‍ಯ, ಪರಿಶುದ್ಧರಾಗ
ಗರಿಗೊಂಡ ಬಲ ಇಳಿದು ಬಂದವಾಗ.
ಎಲ್ಲ ದೇವತೆಗಳೂ ಒಂದೆ ಮರ್‍ತ್ಯ ಶರೀರದಲ್ಲಿ ಬಾಳಿದವು
ಒಂದೇ ಹೆಸರ ತಾಳಿದವು.

ಅಗಲಗಲ ಗತಿಯ ಅಲೆ ಮಸಕು ಭೂಮಂಡಲದಿ ಬಂತು ಬಳಲಿ
ಉತ್ಫುಲ್ಲಸ್ವಪ್ನೋತ್ಥಗುಂಫಗಳಲಿ.
ಭವ್ಯತೆಯ ಕರುವಿಟ್ಟ ಹಾಗೆ ಬಾಳಾಗಿತ್ತು
ಕಡಲಗಲ ಕೈ ಕಾಲ-ಚಕ್ರ ಅಮುಕಿತ್ತು.

ಮಾನವನ ಆತ್ಮ ಮತ್ತೊಮ್ಮೆ ಪಡೆದಿತು ಬಾಳ ಸಾರಥ್ಯ
ಧೀರ ಉದ್ಧತ ದೇವದೇವತೆಗಳಾತಿಥ್ಯ.
ಪ್ರಪ್ರಭಂಜನ ಪಕ್ಷ ಉತ್‌ಕ್ಷಿಪ್ತ ವಾಯುಪಥದಲ್ಲಿ ಹಾರಿತ್ತು
ಭವ್ಯ ಆದರ್‍ಶಕ್ಕೆ ಗುರಿಯಿಟ್ಟು ಎಸೆದ ಈಟಿಯ ಹಾಗೆ ಏರಿತ್ತು.

ಡೆಂಡಣಿಸಿ ಕಳಚಿ ಬಿದ್ದವು ಪುರಾತನಾಯಸ ಕವಚ
ಗೋಡೆ ಸಿಡಿದೊಡೆದು ಬಿದ್ದಿತು ಪುರಾಣ ಪ್ರಕೃತಿ
ತರುಣತರ ಸೌಂದರ್‍ಯ, ಸುವಿಚಾರ, ಸುಪ್ರಭೆಯ ಜಗದಿ
ಹೊಕ್ಕ ದೇವನು ಮತ್ತೆ ತನ್ನ ಹೊಸತನದಿ.

ಮೂಡಿತ್ತು ದೇವವಾಣಿಯ ಸೊಲ್ಲು ಮಾನವರ ತುಟಿಯಲ್ಲು
ಹೃದಯ ಎಚ್ಚತ್ತಿತ್ತು ಮಿಂಚು ಬೆಡಗಿನ ಬಿಳಿಯ ನಸುಕುಗಳಲು
ಗಾಳಿ ಬೆಳಕಿನ ಬಟ್ಟೆ, ಉಸಿರು ಹರ್‍ಷದ ಕುಸರು
ದೇವಲೀಲೆಯ ಆಟದಂತೆ ಬಾಳು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...