Home / ಕವನ / ಕವಿತೆ / ವಿದ್ಯುತ್‌ಪುತ್ರನ ಅವತಾರ

ವಿದ್ಯುತ್‌ಪುತ್ರನ ಅವತಾರ

ಸುಸಮರ್‍ಥನಾದ ವಿದ್ಯುತ್‌ ಪುತ್ರನೊಬ್ಬ ತಾನೀ ಭೂಮಿಗಿಳಿದು ಬಂದ
ಅಪ್ರತಿಮ ತ್ವರಿತಗತಿ ಅಗ್ನಿ-ಪಾದಗಳಿಂದ.
ಮಾನವನ ಮೈ ಕಟ್ಟು ಘನಗರ್‍ಜನೆಯ ತೊಟ್ಟು,
ನರಗರ್‍ಭದಲ್ಲಿ ಹುಟ್ಟಿತ್ತು ಬೆಳಕು.

ಸ್ವರ್‍ಗದತಿ ಶಾಂತಗತಿ, ಮಹಿಮೆಯಾ ಮಾಧುರ್‍ಯ, ಪರಿಶುದ್ಧರಾಗ
ಗರಿಗೊಂಡ ಬಲ ಇಳಿದು ಬಂದವಾಗ.
ಎಲ್ಲ ದೇವತೆಗಳೂ ಒಂದೆ ಮರ್‍ತ್ಯ ಶರೀರದಲ್ಲಿ ಬಾಳಿದವು
ಒಂದೇ ಹೆಸರ ತಾಳಿದವು.

ಅಗಲಗಲ ಗತಿಯ ಅಲೆ ಮಸಕು ಭೂಮಂಡಲದಿ ಬಂತು ಬಳಲಿ
ಉತ್ಫುಲ್ಲಸ್ವಪ್ನೋತ್ಥಗುಂಫಗಳಲಿ.
ಭವ್ಯತೆಯ ಕರುವಿಟ್ಟ ಹಾಗೆ ಬಾಳಾಗಿತ್ತು
ಕಡಲಗಲ ಕೈ ಕಾಲ-ಚಕ್ರ ಅಮುಕಿತ್ತು.

ಮಾನವನ ಆತ್ಮ ಮತ್ತೊಮ್ಮೆ ಪಡೆದಿತು ಬಾಳ ಸಾರಥ್ಯ
ಧೀರ ಉದ್ಧತ ದೇವದೇವತೆಗಳಾತಿಥ್ಯ.
ಪ್ರಪ್ರಭಂಜನ ಪಕ್ಷ ಉತ್‌ಕ್ಷಿಪ್ತ ವಾಯುಪಥದಲ್ಲಿ ಹಾರಿತ್ತು
ಭವ್ಯ ಆದರ್‍ಶಕ್ಕೆ ಗುರಿಯಿಟ್ಟು ಎಸೆದ ಈಟಿಯ ಹಾಗೆ ಏರಿತ್ತು.

ಡೆಂಡಣಿಸಿ ಕಳಚಿ ಬಿದ್ದವು ಪುರಾತನಾಯಸ ಕವಚ
ಗೋಡೆ ಸಿಡಿದೊಡೆದು ಬಿದ್ದಿತು ಪುರಾಣ ಪ್ರಕೃತಿ
ತರುಣತರ ಸೌಂದರ್‍ಯ, ಸುವಿಚಾರ, ಸುಪ್ರಭೆಯ ಜಗದಿ
ಹೊಕ್ಕ ದೇವನು ಮತ್ತೆ ತನ್ನ ಹೊಸತನದಿ.

ಮೂಡಿತ್ತು ದೇವವಾಣಿಯ ಸೊಲ್ಲು ಮಾನವರ ತುಟಿಯಲ್ಲು
ಹೃದಯ ಎಚ್ಚತ್ತಿತ್ತು ಮಿಂಚು ಬೆಡಗಿನ ಬಿಳಿಯ ನಸುಕುಗಳಲು
ಗಾಳಿ ಬೆಳಕಿನ ಬಟ್ಟೆ, ಉಸಿರು ಹರ್‍ಷದ ಕುಸರು
ದೇವಲೀಲೆಯ ಆಟದಂತೆ ಬಾಳು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್