Home / ಕವನ / ಕವಿತೆ / ಅಗ್ನಿರಾಜ

ಅಗ್ನಿರಾಜ

ಅಗ್ನಿರಾಜ:
ಬೆಂಕಿ ನಿಲುವಂಗಿ ತೊಟ್ಟುಕೊಂಡು ಬುವಿಯಿಂದ ಬಂದ ಜೀವ
ಸಪ್ತಸ್ವರ್‍ಗಗಳ ಸುಪ್ತ ಮೌನವನು ದಾಟಿಕೊಂಡು ಯಾವ?
ನೀನು ಏನು ಅಧ್ಯಾತ್ಮದೌರಸನೊ? ಅಭವ ಸ್ವಯಂಭವನು.
ಪರಂಧಾಮದಾ ಅತಿಥಿಯೇನು? ಪೌರಾಣ ಕಾಲದವನು.

ಮನುಕುಲ ದೂತ:
ಮಾನವ್ಯಕುಲದ ಹರಿಕಾರ ನಾನು, ಆಂತರ್‍ಯದಾತ್ಮಸಾನು;
ಇರುಳನ್ನು ಕೊಡಹಿ ಸಾವನ್ನೆ ತಡೆದ ಪ್ರಪ್ರಥಮ ಪ್ರಮಥ ನಾನು;
ಅಮೃತಬಿಂಬ ಪ್ರತಿಬಿಂಬಿಸಿರುವ ಸೌಂದರ್‍ಯಲಕ್ಷ್ಮಿಸೂನು.
ಅಮರ ಜ್ಯೋತಿ ಮೃಗವೇಧಕಾಗಿ ಬಂದಂಥ ವ್ಯಾಧಶಿವನು.

ಅಗ್ನಿ ರಾಜ:
ತನ್ನ ಶಕ್ತಿಯಲಿ ನಿನ್ನ ಸುತ್ತಿರುವುದಾವ ಬೆಂಕಿ ಉರಿಯು?
ಪಾಲಿಸುತ್ತಿರೆಯು ಬರ್‍ಚಿ ನಾಲಗೆಯ ಚಾಚಿ ಕಾಯುತಿರೆಯು
ಸನಾತನದ ಸತ್ಕಾಲದಲ್ಲಿ ಸಂಚರಿಸುತ್ತಿಲ್ಲಿ ಬಂದೆ
ಕಲ್ಪನಾತೀತವಾದ ನವಕಿರಣದೊಂದು ಅಂಶವೆಂದೆ?

ಮನುಕುಲ ದೂತ:
ನವೋನವದ ಜಾಗೃತಿಯಲೆದ್ದ ಜೀವಾಗ್ನಿ ತೋಚುತಿಹುದು;
ಮರಣ ಸೀಳಿ ಉದ್ಭವಿಸಿ ಮೇಲೆ ಶಾಶ್ವತಕೆ ಚಾಚುತಿಹುದು;
ಯಜ್ಞ ಪಕ್ಷಿ ಗುರಿಯತ್ತ ಹಾರಿ ಶಿಖೆ ಏರಿ ಹರಿಯುತಿಹುದು;
ಮಾನವ್ಯದಲ್ಲಿ ಮಲಗಿದ್ದು ಎದ್ದ ದೇವತ್ವ ಉರಿಯುತಿಹುದು.

ಅಗ್ನಿರಾಜ:
ಭಂಗುರದ ಹಂಗು ಹರಕೊಂಡು ಬಂದೆ, ಓ ಮಗುವೆ ಏನೋ ಬೇಕೊ?
ಮುಕ್ತನಾಗಿ ಸಾವಿರದ ಸಯ್ತಿನಲಿ ಗುಮ್ಮನಿಹುದೆ? ಸಾಕೋ.
ಏನು ಬ್ರಹ್ಮ ಸಂಮುಖಕೆ ಸಾಕ್ಷಿಯಾಗಿರುವೆ ಎನುವೆ ನೀನು
ಅಸ್ಪರ್‍ಶ ಯೋಗ ನಿರ್‍ವಾಣದಲ್ಲಿ ಲಯವಾಗಬೇಕು ಏನು?

ಮನುಕುಲ ದೂತ:
ಪಾತಾಳಖಾತದಜ್ಞಾನದಲ್ಲು ಹೊತ್ತಿರಲಿ ದಿವ್ಯದೀಪ್ತಿ.
ನರಕಯಾತನೆಯ ಜೀವದಲ್ಲಿ ತಾನಿರಲಿ ದೇವಶಕ್ತಿ.
ಮೂರುಕಾಲಕೂ ಮೀರಿ ದುಃಖಿಸದ ಸುಖವು ಭೂಮಿಗೆಂದೆ
ಅಕ್ಷುಬ್ಧವಾದ ಹದಗೆಡದ ಶಾಂತಿ ಮಾನವಗೆ ಬೇಡಬಂದೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...