Home / ಕವನ / ಕವಿತೆ / ಅಗ್ನಿರಾಜ

ಅಗ್ನಿರಾಜ

ಅಗ್ನಿರಾಜ:
ಬೆಂಕಿ ನಿಲುವಂಗಿ ತೊಟ್ಟುಕೊಂಡು ಬುವಿಯಿಂದ ಬಂದ ಜೀವ
ಸಪ್ತಸ್ವರ್‍ಗಗಳ ಸುಪ್ತ ಮೌನವನು ದಾಟಿಕೊಂಡು ಯಾವ?
ನೀನು ಏನು ಅಧ್ಯಾತ್ಮದೌರಸನೊ? ಅಭವ ಸ್ವಯಂಭವನು.
ಪರಂಧಾಮದಾ ಅತಿಥಿಯೇನು? ಪೌರಾಣ ಕಾಲದವನು.

ಮನುಕುಲ ದೂತ:
ಮಾನವ್ಯಕುಲದ ಹರಿಕಾರ ನಾನು, ಆಂತರ್‍ಯದಾತ್ಮಸಾನು;
ಇರುಳನ್ನು ಕೊಡಹಿ ಸಾವನ್ನೆ ತಡೆದ ಪ್ರಪ್ರಥಮ ಪ್ರಮಥ ನಾನು;
ಅಮೃತಬಿಂಬ ಪ್ರತಿಬಿಂಬಿಸಿರುವ ಸೌಂದರ್‍ಯಲಕ್ಷ್ಮಿಸೂನು.
ಅಮರ ಜ್ಯೋತಿ ಮೃಗವೇಧಕಾಗಿ ಬಂದಂಥ ವ್ಯಾಧಶಿವನು.

ಅಗ್ನಿ ರಾಜ:
ತನ್ನ ಶಕ್ತಿಯಲಿ ನಿನ್ನ ಸುತ್ತಿರುವುದಾವ ಬೆಂಕಿ ಉರಿಯು?
ಪಾಲಿಸುತ್ತಿರೆಯು ಬರ್‍ಚಿ ನಾಲಗೆಯ ಚಾಚಿ ಕಾಯುತಿರೆಯು
ಸನಾತನದ ಸತ್ಕಾಲದಲ್ಲಿ ಸಂಚರಿಸುತ್ತಿಲ್ಲಿ ಬಂದೆ
ಕಲ್ಪನಾತೀತವಾದ ನವಕಿರಣದೊಂದು ಅಂಶವೆಂದೆ?

ಮನುಕುಲ ದೂತ:
ನವೋನವದ ಜಾಗೃತಿಯಲೆದ್ದ ಜೀವಾಗ್ನಿ ತೋಚುತಿಹುದು;
ಮರಣ ಸೀಳಿ ಉದ್ಭವಿಸಿ ಮೇಲೆ ಶಾಶ್ವತಕೆ ಚಾಚುತಿಹುದು;
ಯಜ್ಞ ಪಕ್ಷಿ ಗುರಿಯತ್ತ ಹಾರಿ ಶಿಖೆ ಏರಿ ಹರಿಯುತಿಹುದು;
ಮಾನವ್ಯದಲ್ಲಿ ಮಲಗಿದ್ದು ಎದ್ದ ದೇವತ್ವ ಉರಿಯುತಿಹುದು.

ಅಗ್ನಿರಾಜ:
ಭಂಗುರದ ಹಂಗು ಹರಕೊಂಡು ಬಂದೆ, ಓ ಮಗುವೆ ಏನೋ ಬೇಕೊ?
ಮುಕ್ತನಾಗಿ ಸಾವಿರದ ಸಯ್ತಿನಲಿ ಗುಮ್ಮನಿಹುದೆ? ಸಾಕೋ.
ಏನು ಬ್ರಹ್ಮ ಸಂಮುಖಕೆ ಸಾಕ್ಷಿಯಾಗಿರುವೆ ಎನುವೆ ನೀನು
ಅಸ್ಪರ್‍ಶ ಯೋಗ ನಿರ್‍ವಾಣದಲ್ಲಿ ಲಯವಾಗಬೇಕು ಏನು?

ಮನುಕುಲ ದೂತ:
ಪಾತಾಳಖಾತದಜ್ಞಾನದಲ್ಲು ಹೊತ್ತಿರಲಿ ದಿವ್ಯದೀಪ್ತಿ.
ನರಕಯಾತನೆಯ ಜೀವದಲ್ಲಿ ತಾನಿರಲಿ ದೇವಶಕ್ತಿ.
ಮೂರುಕಾಲಕೂ ಮೀರಿ ದುಃಖಿಸದ ಸುಖವು ಭೂಮಿಗೆಂದೆ
ಅಕ್ಷುಬ್ಧವಾದ ಹದಗೆಡದ ಶಾಂತಿ ಮಾನವಗೆ ಬೇಡಬಂದೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...