Home / ಕವನ / ಕವಿತೆ / ಅಗ್ನಿರಾಜ

ಅಗ್ನಿರಾಜ

ಅಗ್ನಿರಾಜ:
ಬೆಂಕಿ ನಿಲುವಂಗಿ ತೊಟ್ಟುಕೊಂಡು ಬುವಿಯಿಂದ ಬಂದ ಜೀವ
ಸಪ್ತಸ್ವರ್‍ಗಗಳ ಸುಪ್ತ ಮೌನವನು ದಾಟಿಕೊಂಡು ಯಾವ?
ನೀನು ಏನು ಅಧ್ಯಾತ್ಮದೌರಸನೊ? ಅಭವ ಸ್ವಯಂಭವನು.
ಪರಂಧಾಮದಾ ಅತಿಥಿಯೇನು? ಪೌರಾಣ ಕಾಲದವನು.

ಮನುಕುಲ ದೂತ:
ಮಾನವ್ಯಕುಲದ ಹರಿಕಾರ ನಾನು, ಆಂತರ್‍ಯದಾತ್ಮಸಾನು;
ಇರುಳನ್ನು ಕೊಡಹಿ ಸಾವನ್ನೆ ತಡೆದ ಪ್ರಪ್ರಥಮ ಪ್ರಮಥ ನಾನು;
ಅಮೃತಬಿಂಬ ಪ್ರತಿಬಿಂಬಿಸಿರುವ ಸೌಂದರ್‍ಯಲಕ್ಷ್ಮಿಸೂನು.
ಅಮರ ಜ್ಯೋತಿ ಮೃಗವೇಧಕಾಗಿ ಬಂದಂಥ ವ್ಯಾಧಶಿವನು.

ಅಗ್ನಿ ರಾಜ:
ತನ್ನ ಶಕ್ತಿಯಲಿ ನಿನ್ನ ಸುತ್ತಿರುವುದಾವ ಬೆಂಕಿ ಉರಿಯು?
ಪಾಲಿಸುತ್ತಿರೆಯು ಬರ್‍ಚಿ ನಾಲಗೆಯ ಚಾಚಿ ಕಾಯುತಿರೆಯು
ಸನಾತನದ ಸತ್ಕಾಲದಲ್ಲಿ ಸಂಚರಿಸುತ್ತಿಲ್ಲಿ ಬಂದೆ
ಕಲ್ಪನಾತೀತವಾದ ನವಕಿರಣದೊಂದು ಅಂಶವೆಂದೆ?

ಮನುಕುಲ ದೂತ:
ನವೋನವದ ಜಾಗೃತಿಯಲೆದ್ದ ಜೀವಾಗ್ನಿ ತೋಚುತಿಹುದು;
ಮರಣ ಸೀಳಿ ಉದ್ಭವಿಸಿ ಮೇಲೆ ಶಾಶ್ವತಕೆ ಚಾಚುತಿಹುದು;
ಯಜ್ಞ ಪಕ್ಷಿ ಗುರಿಯತ್ತ ಹಾರಿ ಶಿಖೆ ಏರಿ ಹರಿಯುತಿಹುದು;
ಮಾನವ್ಯದಲ್ಲಿ ಮಲಗಿದ್ದು ಎದ್ದ ದೇವತ್ವ ಉರಿಯುತಿಹುದು.

ಅಗ್ನಿರಾಜ:
ಭಂಗುರದ ಹಂಗು ಹರಕೊಂಡು ಬಂದೆ, ಓ ಮಗುವೆ ಏನೋ ಬೇಕೊ?
ಮುಕ್ತನಾಗಿ ಸಾವಿರದ ಸಯ್ತಿನಲಿ ಗುಮ್ಮನಿಹುದೆ? ಸಾಕೋ.
ಏನು ಬ್ರಹ್ಮ ಸಂಮುಖಕೆ ಸಾಕ್ಷಿಯಾಗಿರುವೆ ಎನುವೆ ನೀನು
ಅಸ್ಪರ್‍ಶ ಯೋಗ ನಿರ್‍ವಾಣದಲ್ಲಿ ಲಯವಾಗಬೇಕು ಏನು?

ಮನುಕುಲ ದೂತ:
ಪಾತಾಳಖಾತದಜ್ಞಾನದಲ್ಲು ಹೊತ್ತಿರಲಿ ದಿವ್ಯದೀಪ್ತಿ.
ನರಕಯಾತನೆಯ ಜೀವದಲ್ಲಿ ತಾನಿರಲಿ ದೇವಶಕ್ತಿ.
ಮೂರುಕಾಲಕೂ ಮೀರಿ ದುಃಖಿಸದ ಸುಖವು ಭೂಮಿಗೆಂದೆ
ಅಕ್ಷುಬ್ಧವಾದ ಹದಗೆಡದ ಶಾಂತಿ ಮಾನವಗೆ ಬೇಡಬಂದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...