ಅಂತರ್‍ಯಾಮಿ ವೈಶ್ವಾನರ

ನನ್ನ ಜೀವಾಲಿಂಗನಾಂಗದಲ್ಲಿ ಪೂರ್‍ಣ ಪ್ರಪಂಚ
ಕೃತ್ತಿಕೆಯ ಕಿಚ್ಚಗಸ್ತ್ಯನ ತಪಃಸುಖವು.
ಜೀವಜೀವದ ರೂಪರೂಪದಲಿ ನಾ ಕಾಂಬೆ
ನನ್ನದೇ ಮೈಯ ಮತ್ತೊಂದು ಮುಖವು.

ನನ್ನ ನೋಡುವ ನೋಟ ನನ್ನದೇ ಕಣ್ಣಾಟ
ಎಲ್ಲೆದೆಯ ಮಿಡಿತ ನನ್ನೆದೆಯ ಠಾವು.
ನನ್ನ ನರದಲಿ ಹರಿಯುತಿದೆ ಜಗದ ಮಧುರ ಸೊಗ
ಅದರ ದುಃಖದ ಕೋಟಿ ನನ್ನ ನೋವು.

ಆದರೇನಾ ಕರ್‍ಮಸಂತತಿಯ ತೆರೆಗಳೊಲು
ನನ್ನ ಮೇಲ್ಮೈ ಮಾತ್ರ ನನ್ನ ತಿರುಳು.
ಮೊಳಕೆ ಮೂಡದ ಬೀಜ, ಕಾಲ ಮೀರಿದ ತೇಜ
ನಾನು ಕನ್ನಡಿ ಉಳಿದುದೆಲ್ಲ ನೆರಳು.

ನನ್ನ ಬ್ರಹ್ಮಾಂಡದಲಿ ಸಂಸಾರ ಸುಳಿ ಇತ್ತು
ಅಲ್ಲಿ ನಾ ಹುದುಗಿದ್ದೆ : ಮುನ್ನೀರ-ಎದೆ-ಮುತ್ತು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾಚಿಕೆ
Next post ವಾಗ್ದೇವಿ – ೩೦

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…