ಅತೃಪ್ತಿ

ಎಲ್ಲಿದೆಲ್ಲಿದೆ ತಣಿವು ? ಏತರಲ್ಲಿದೆ ತಣಿವು ?
ಎಲ್ಲಿಯೆಲ್ಲಿಯು ಕಾಣಲೊಲ್ಲದಾ ತಣಿವು!

ಕುಸುರುಕುಸುರಿನ ಚಿನ್ನ -ರನ್ನ ದೊಡವೆಗಳಿಟ್ಟು
ಹೊಸ ಮಿರುಗಿನಾ ಸೀರೆ ಬಣ್ಣಗುಪ್ಪಸ ತೊಟ್ಟು
ಸಾಕುಸಾಕಿನ್ನೆಂಬ ತಣಿವ ಪಡೆಯುವರು,
ಆ ಕೆಳದಿಯರು ನಕ್ಕು ನಲಿದಾಡುತಿಹರು.

ಇದು ಏನು? ನನ್ನದೀ ಎದೆಯಾಟವಚ್ಚರಿಯು!
ಒಡವೆಯುಡುಗೆಯನೊಲಿದು ಪಡೆಯುವೆನು, ಆದರೆಯು
ಒಡವೆ ಬಗೆದುಗುಡವನು ದೂಡಲಿಲ್ಲ!
ಉಡುಗೆ ತಣಿವನು ನಸುವು ನೀಡಲಿಲ್ಲ!

ಸರಿವರಯದವರೆಲ್ಲ ತೆರತೆರದ-ಹುರುಳಿರುವ-
ಅರಳುಗಳ ನುಡಿಮುಡಿದು ಹರುಷದಲಿ ಹಿಗ್ಗುವರು.
ಹಾರಯಿಸಿ ಹಾರಯಿಸಿ ಹೂಮುಡಿಯೆ ನಾನು,
ತೀರಲಿಲ್ಲವತೃಪ್ತಿ, ಹೇರಿತದು ಇನ್ನೂ!

ಕೊಳಲೂದಿ ವೀಣೆ ತಂಬೂರಿಗಳ ಬಾಜಿಸುತ
ಗೆಳತಿಯರು ಸುಲಭದಲಿ ಗಳಿಸುವರು ತೃಪ್ತಿಯನು;
ಕೊಳಲುಲಿಯು ಬಗೆದುಗುಡ ದೊಡಲಿಲ್ಲ!
ವೀಣೆ ತಣಿವನು ನಸುವು ನೀಡಲಿಲ್ಲ!

ಅನುಕೂಲದೈವರಾ ವನಿತೆಯರು, ನಾ ದೈವ-
ದನುನಯವ ಕಳೆದುಕೊಂಡವಳು; ದಿಟವೇ ದೇವ?
ಅಲ್ಲವಿಂತಿದು! ಅವರದದೆ ಸುಖದ ಕೊನೆಯು;
ಎಲ್ಲಿದೆಯೊ ದೂರ ನನ್ನಾ ಸುಖದ ಮನೆಯು..!

ಆ ಸುಖದ ಮನೆಯನೊಂದಿಸುವ ಒಡವೆಯ ಬಯಸಿ
ಆಶೆ-ಸೊನ್ನರತಿ ಬಗೆಯೊಳಗೆ ಬೆಂಕೆಯನಿರಿಸಿ
ಊದಿ ಉರಿಮಾಡಿ ಏನನೋ ಕಾಸುತಿಹಳು,
ಏತರಿಂದಲೊ ಯಾವುದನೊ ಹಣಿಯುತಿಹಳು.
* * * *
ಮನವ ಮನೆಮಾಡಿರುವ ದುಗುಡವನು ತೆಗೆದು
ತಣಿವನೀವಾ ಒಡವೆ ದೊರೆವುದೆನಗೆಂದು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಮ್ಮೆ ಪ್ರೀತಿಯಲಿ
Next post ನಾಳಿನ ಮಗು

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…