Home / ಕವನ / ಕವಿತೆ / ಸರಸ್ವತಿಗೆ

ಸರಸ್ವತಿಗೆ

ತಿಳಿಗೊಳದ ತೀರದಿಹ ತನಿಗಲ್ಲ ಗದುಗೆ-
ಯನೇರಿ ಸರದ ಸುಯ್ಯನೆ ಶೃತಿಯಲ್ಲಿ
ಕೋಕಿಲ, ಶುಕ, ರವಂಗಳ ಹಿಮ್ಮೇಳದಲಿ
ನವಿಲು ನೃತ್ಯಕೆ ತಾಳ ಮೇಳೈಸಿ
ವೀಣಾತರಂಗ ತನ್ಮಯಳೆ ತಾಯೆ
ತರವೇನೆ ನಿನಗೀಪರಿಯು?
ಕನ್ನಡ ತಾಯ ತಾಪತ್ರಯಂಗಳಂ
ಎವೆಯಿಕ್ಕದನುದಿನ ನೋಡಿ ನೋಡಿ
ಸಂಗೀತ ಸಾಗರದೀಜುಬಿದ್ದೇಳುತಿಹಿ.
ದೇವಿ, ಸರಸ್ವತಿದೇವಿ, ವಾಗ್ದೇವಿ,
ಬ್ರಹ್ಮದೇವನರಾಣಿ, ವೀಣಾ ಪಾಣಿ,
ಕೀರ್‍ವಾಣಿ, ಕವಿಶ್ರೇಣಿ ಕಲ್ಯಾಣಿ
ನಿನ್ನ ನಾನನವರತ ಭಜಿಸಲೇಕೆ?
ಸಪ್ತ ಸಾಗರಗಳಭಿಷವಂ ಗೈದು
ಮೂರ್‍ತ ಮಾರ್‍ತಾಂಡ ಚಂದ್ರಮತೀಡಿ
ಕಾನನೋದ್ಯಾನ ಕುಸುಮಗಳ ಚೆಲ್ಲಿ
ಸುಪ್ರಭಾತ ಸುಮಂಗಲ ಪಾಡಿ
ಕುಣಿದು ಕೊಂಡಾಡಿ ಪೂಜಿಸಲೇಕೆ?
ಬಾ ಹೊರಗೆ ವೀಣೆಯನಿಟ್ಟು ವಿಶ್ರಾಂತಿ
ಕೊಟ್ಟು, ಕೆಲಕಾಲ ಖಡ್ಗ ಪಾಣಿನಿಯಾಗಿ.
ಮಲ್ಲಗಚ್ಚಿಯ ಹಾಕಿ ಬಾ ಬೆಂಗಾವಲಾಗಿ.
ಮೂಜಗಕೆ ಗಂಡ ಭೇರುಂಡ ಗಾಂಡೀವಿ-
ಪುತ್ರಾಭಿಮನ್ಯು ಚಕ್ರವ್ಯೂಹವನೆ
ಭೇದಿಸಿದ ಬಾಣದ ಶಕ್ತಿ ಬಹುದೆನ್ನ
ಗಲುಗಿಗೆ. ಮೌಢ್ಯ ಕೋಟೆಯ ಕೆಡಹಿ
ನಾಡಗುಡಿ ಕಟ್ಟುವೆನು. ಕನ್ನಡ ತಾಯ
ತಣಿಸುವೆನು. ನುಡಿದೇವಿ ನುಡಿಸಾಗ
ನಿನ್ನ ವೀಣೆಯನು ತೋಷದಾಕಾಶದಲಿ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...