ನನ್ನ ಕವಿತೆ

ಬಿಚ್ಚುಗನ್ನಡದಿ ಬರೆವ ಕವಿತೆಗಳ ಕಂಡು
ಕಟ್ಟಳೆಗೆಟ್ಟ ಕುಲಗೇಡಿಯೆಂಬಭಿಧಾನವಿತ್ತು
ಮನಸಾರೆ ನಗುವಿಯೇತಕೆ ಅಣ್ಣ? ನೀ
ನಗುವಿಯೆಂಬುದ ಮರೆತು ನಾ ಕವಿತ ಕಟ್ಟಿಲ್ಲ.
ನೀ ‘ಕವಿತೆ’ಯೆನಲೆಂದು ಕವಿತೆ ಬರೆದಿಲ್ಲ.
ಕವಿಕಂಠೀರವರ ಕೀರ್‍ತಿಯನೆ ಬಯಸಿಲ್ಲ.
ನನ್ನೆದೆಯ ದನಿ ನುಡಿಸಿದುದ ಮೂಡಿಸಿದೆ.
ಜೀವನದುಸಿರು ಭಾವದಿ ಬೆರೆತು ಹಾಡಿದುದು.
ಭೂಗರ್‍ಭವನೆ ಸೀಳಿ, ಭೂತಲ ಕಂಡು
ಬೀಜಗಳ ಬಿತ್ತಿ ಬೆಳೆಕೊಂಡು, ಜಗದ ಬಾ-
ಯ್ಗಿಟ್ಟು, ಹೊಟ್ಟೆಗಿಲ್ಲದೆ ಕೆಟ್ಟು, ಕಣ್ಣೀರ
ಸುರಿಸುತಿಹ ಕಂಗಾಲನೊಡಲನೊಳಸೇರಿ
ನೆತ್ತರದ ನಾಡಿಗಳನದುಮಿ ದನಿಗುಡಿಸಿ
ಹಾಡಿದೆನು; ಹಾಡುತಿಹೆ; ಹಾಡುವೆನು.
ಅಪರಾಧಮೇನಿದರೊಳಗೆ ನಗುವ ಅಣ್ಣ?
ಕವನದ ಗುಟ್ಟು ಕಟ್ಟಿನೊಳಗಿಲ್ಲವೆಂಬುದ-
ನರಿದು ನಿರ್‍ಬಲರ ನಗುವ ನಿಲ್ಲಿಸಿ ಬಾ ಸಡ್ಡು-
ಹೊಡೆ. ನನಗು ಮಿಗಿಲೆನಿಪ ಕವಿತೆಗಳ
ಕಟ್ಟು. ಆಗೆನ್ನ ಕಂಡು ಮನದಣಿಯೆ
ನಗು; ನಿನ್ನ ನಗುವಿಗೆ ಬಹುದು ಬೆಲೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೊಳಕೆ
Next post ವಚನ ವಿಚಾರ – ಇದು ಇದ್ದರೆ ಅದು

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

cheap jordans|wholesale air max|wholesale jordans|wholesale jewelry|wholesale jerseys