ಓಡುತೆ ಬಾ! ಬಾ!


ಮೂಡಣ ದಿಶೆಯಲಿ
ಪಡುವಣ ದಿಶೆಯಲಿ
ಮೂಡುವ ಅಡಗುವ
ರವಿ ಹೊಂಬಣ್ಣವ
ಭರದಲಿ, ಹರುಷದಿ
ಹೊಗಳುತಲಿರುತಿರೆ ಕವಿಜನರು;
ಚೆನ್ನೆಯೆ ನಿನ್ನಯ
ಕನ್ನಡಿ ಹೊಳಪಿನ
ಕನ್ನೆಯ ಮೇಲಣ
ಕೆಂಬಣ್ಣವ ನಾ
ಹೊಗಳುತ ನಿಂತಿಹೆ
ಓಡುತೆ ಬಾ! ಬಾ! ಹಾರುತೆ ಬಾ! ಬಾ!


ಸರದಲಿಶೋಭಿಪ
ಅರಳಿದಕಮಲಕೆ
ಗುಂಗೀಹುಳಗಳು
ಮಕರಂದವ ಸಲೆ
ಸೇವಿಸಲೆಂದುಂ ಧಾವಿಪ
ನೋಟವ ಬಣ್ಣಿಸುತಿರಲಾಕವಿಜನರು;

ಸರಸಿಜವದನೆಯೆ
ನನ್ನಯಪ್ರೇಮದ
ಗುಂಗೀಹುಳವದು
ನಿನ್ನಯ ಅಧರಾಮೃತವಂ
ಸೇವಿಸೆ ಧಾವಿಸಿ
ದಣಿದಿದೆ ಬಾ! ಬಾ! ತಣಿಸಲು ಬಾ! ಬಾ!


ಬೆಳಗಿನಜಾವದಿ
ತೋಟದನೋಟ!
ಪರಿಮಳಬೀರುವ
ಪೂಗಳನೋಟ!
ಕುಣಿಕುಣಿದಾಡುವ
ನವಿಲಿನ ನೋಟವದೆಲ್ಲವು ಕವಿಜನಕಿರಲಿ;
ರಮಣಿಯೆ ನನಗಿದೆ
ನಿನ್ನಯ ನೋಟ!
ಆದದೋ ಅಲ್ಲಿದೆ
ಪ್ರೇಮದ ತೋಟ!
ಸುಂದರಿ ನಲಿಯಲು
ಓಡುತೆ ಬಾ! ಬಾ! ಹಾರುತೆ ಬಾ! ಬಾ!


ರಮಣಿಯೆ ನೋಡದೂ
ಹಿರಿಯರು ನೀಡಿದ
ಗಾಂಧಿಯು ಬಯಸುವ
ಪಾವನ ರಾಟಿಯ
ಹಿಂದಕೆ ಒಗೆವುದೆ?
ಬಾ! ಬಾ! ತಿರುಹಲು ಬೇಗನೆ ಬಾ! ಬಾ!
ನೂಲನುತೆಗೆದಿಡು!
ಮಗ್ಗವಹೂಡುವೆ!
ವಸ್ತ್ರವಮಾಡುವೆ!
ಬಡವಗೆನೀಡಲು
ಪುಣ್ಯವಪಡೆಯಲು
ಓಡುತೆ ಬಾ! ಬಾ! ಹಾರುತೆ ಬಾ! ಬಾ!


ಕಮಲಿನಿಬೇಕು;
ನನಯಬಲವದು
ನಿನಗಿರಬೇಕು;
ನಿನ್ನಯಬಲವದು
ನನಗಿರಬೇಕು;
ಈರ್‍ವರ ಬಲವಧುದೇಶಕೆಬೇಕು;
ಕನ್ನಡಮಾತೆಯ
ಭಾರತಮಾತೆಯ
ಸೇವೆಯಗೈಯುತೆ
ಪ್ರೇಮದಲೀರ್‍ವರು
ಸಗ್ಗಕೆಪೋಗುವಾ!
ಓಡುತೆ ಬಾ! ಹಾ! ಹಾರುತೆ ಬಾ! ಬಾ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕವಿ-ಕಾವ್ಯ
Next post ವಚನ ವಿಚಾರ – ನೀರಿನಂಥ ಮನಸ್ಸು

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…