Home / ಕವನ / ಕವಿತೆ / ಓಡುತೆ ಬಾ! ಬಾ!

ಓಡುತೆ ಬಾ! ಬಾ!


ಮೂಡಣ ದಿಶೆಯಲಿ
ಪಡುವಣ ದಿಶೆಯಲಿ
ಮೂಡುವ ಅಡಗುವ
ರವಿ ಹೊಂಬಣ್ಣವ
ಭರದಲಿ, ಹರುಷದಿ
ಹೊಗಳುತಲಿರುತಿರೆ ಕವಿಜನರು;
ಚೆನ್ನೆಯೆ ನಿನ್ನಯ
ಕನ್ನಡಿ ಹೊಳಪಿನ
ಕನ್ನೆಯ ಮೇಲಣ
ಕೆಂಬಣ್ಣವ ನಾ
ಹೊಗಳುತ ನಿಂತಿಹೆ
ಓಡುತೆ ಬಾ! ಬಾ! ಹಾರುತೆ ಬಾ! ಬಾ!


ಸರದಲಿಶೋಭಿಪ
ಅರಳಿದಕಮಲಕೆ
ಗುಂಗೀಹುಳಗಳು
ಮಕರಂದವ ಸಲೆ
ಸೇವಿಸಲೆಂದುಂ ಧಾವಿಪ
ನೋಟವ ಬಣ್ಣಿಸುತಿರಲಾಕವಿಜನರು;

ಸರಸಿಜವದನೆಯೆ
ನನ್ನಯಪ್ರೇಮದ
ಗುಂಗೀಹುಳವದು
ನಿನ್ನಯ ಅಧರಾಮೃತವಂ
ಸೇವಿಸೆ ಧಾವಿಸಿ
ದಣಿದಿದೆ ಬಾ! ಬಾ! ತಣಿಸಲು ಬಾ! ಬಾ!


ಬೆಳಗಿನಜಾವದಿ
ತೋಟದನೋಟ!
ಪರಿಮಳಬೀರುವ
ಪೂಗಳನೋಟ!
ಕುಣಿಕುಣಿದಾಡುವ
ನವಿಲಿನ ನೋಟವದೆಲ್ಲವು ಕವಿಜನಕಿರಲಿ;
ರಮಣಿಯೆ ನನಗಿದೆ
ನಿನ್ನಯ ನೋಟ!
ಆದದೋ ಅಲ್ಲಿದೆ
ಪ್ರೇಮದ ತೋಟ!
ಸುಂದರಿ ನಲಿಯಲು
ಓಡುತೆ ಬಾ! ಬಾ! ಹಾರುತೆ ಬಾ! ಬಾ!


ರಮಣಿಯೆ ನೋಡದೂ
ಹಿರಿಯರು ನೀಡಿದ
ಗಾಂಧಿಯು ಬಯಸುವ
ಪಾವನ ರಾಟಿಯ
ಹಿಂದಕೆ ಒಗೆವುದೆ?
ಬಾ! ಬಾ! ತಿರುಹಲು ಬೇಗನೆ ಬಾ! ಬಾ!
ನೂಲನುತೆಗೆದಿಡು!
ಮಗ್ಗವಹೂಡುವೆ!
ವಸ್ತ್ರವಮಾಡುವೆ!
ಬಡವಗೆನೀಡಲು
ಪುಣ್ಯವಪಡೆಯಲು
ಓಡುತೆ ಬಾ! ಬಾ! ಹಾರುತೆ ಬಾ! ಬಾ!


ಕಮಲಿನಿಬೇಕು;
ನನಯಬಲವದು
ನಿನಗಿರಬೇಕು;
ನಿನ್ನಯಬಲವದು
ನನಗಿರಬೇಕು;
ಈರ್‍ವರ ಬಲವಧುದೇಶಕೆಬೇಕು;
ಕನ್ನಡಮಾತೆಯ
ಭಾರತಮಾತೆಯ
ಸೇವೆಯಗೈಯುತೆ
ಪ್ರೇಮದಲೀರ್‍ವರು
ಸಗ್ಗಕೆಪೋಗುವಾ!
ಓಡುತೆ ಬಾ! ಹಾ! ಹಾರುತೆ ಬಾ! ಬಾ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...