Home / ಕವನ / ಕವಿತೆ / ಓಡುತೆ ಬಾ! ಬಾ!

ಓಡುತೆ ಬಾ! ಬಾ!


ಮೂಡಣ ದಿಶೆಯಲಿ
ಪಡುವಣ ದಿಶೆಯಲಿ
ಮೂಡುವ ಅಡಗುವ
ರವಿ ಹೊಂಬಣ್ಣವ
ಭರದಲಿ, ಹರುಷದಿ
ಹೊಗಳುತಲಿರುತಿರೆ ಕವಿಜನರು;
ಚೆನ್ನೆಯೆ ನಿನ್ನಯ
ಕನ್ನಡಿ ಹೊಳಪಿನ
ಕನ್ನೆಯ ಮೇಲಣ
ಕೆಂಬಣ್ಣವ ನಾ
ಹೊಗಳುತ ನಿಂತಿಹೆ
ಓಡುತೆ ಬಾ! ಬಾ! ಹಾರುತೆ ಬಾ! ಬಾ!


ಸರದಲಿಶೋಭಿಪ
ಅರಳಿದಕಮಲಕೆ
ಗುಂಗೀಹುಳಗಳು
ಮಕರಂದವ ಸಲೆ
ಸೇವಿಸಲೆಂದುಂ ಧಾವಿಪ
ನೋಟವ ಬಣ್ಣಿಸುತಿರಲಾಕವಿಜನರು;

ಸರಸಿಜವದನೆಯೆ
ನನ್ನಯಪ್ರೇಮದ
ಗುಂಗೀಹುಳವದು
ನಿನ್ನಯ ಅಧರಾಮೃತವಂ
ಸೇವಿಸೆ ಧಾವಿಸಿ
ದಣಿದಿದೆ ಬಾ! ಬಾ! ತಣಿಸಲು ಬಾ! ಬಾ!


ಬೆಳಗಿನಜಾವದಿ
ತೋಟದನೋಟ!
ಪರಿಮಳಬೀರುವ
ಪೂಗಳನೋಟ!
ಕುಣಿಕುಣಿದಾಡುವ
ನವಿಲಿನ ನೋಟವದೆಲ್ಲವು ಕವಿಜನಕಿರಲಿ;
ರಮಣಿಯೆ ನನಗಿದೆ
ನಿನ್ನಯ ನೋಟ!
ಆದದೋ ಅಲ್ಲಿದೆ
ಪ್ರೇಮದ ತೋಟ!
ಸುಂದರಿ ನಲಿಯಲು
ಓಡುತೆ ಬಾ! ಬಾ! ಹಾರುತೆ ಬಾ! ಬಾ!


ರಮಣಿಯೆ ನೋಡದೂ
ಹಿರಿಯರು ನೀಡಿದ
ಗಾಂಧಿಯು ಬಯಸುವ
ಪಾವನ ರಾಟಿಯ
ಹಿಂದಕೆ ಒಗೆವುದೆ?
ಬಾ! ಬಾ! ತಿರುಹಲು ಬೇಗನೆ ಬಾ! ಬಾ!
ನೂಲನುತೆಗೆದಿಡು!
ಮಗ್ಗವಹೂಡುವೆ!
ವಸ್ತ್ರವಮಾಡುವೆ!
ಬಡವಗೆನೀಡಲು
ಪುಣ್ಯವಪಡೆಯಲು
ಓಡುತೆ ಬಾ! ಬಾ! ಹಾರುತೆ ಬಾ! ಬಾ!


ಕಮಲಿನಿಬೇಕು;
ನನಯಬಲವದು
ನಿನಗಿರಬೇಕು;
ನಿನ್ನಯಬಲವದು
ನನಗಿರಬೇಕು;
ಈರ್‍ವರ ಬಲವಧುದೇಶಕೆಬೇಕು;
ಕನ್ನಡಮಾತೆಯ
ಭಾರತಮಾತೆಯ
ಸೇವೆಯಗೈಯುತೆ
ಪ್ರೇಮದಲೀರ್‍ವರು
ಸಗ್ಗಕೆಪೋಗುವಾ!
ಓಡುತೆ ಬಾ! ಹಾ! ಹಾರುತೆ ಬಾ! ಬಾ!
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್