Home / ಲೇಖನ / ಇತರೆ / ವಚನ ವಿಚಾರ – ಜ್ಞಾನ-ಕ್ರಿಯೆ

ವಚನ ವಿಚಾರ – ಜ್ಞಾನ-ಕ್ರಿಯೆ

ಅಂಬಿನ ಹಿಳಿಕಿನಲ್ಲಿ ಕಟ್ಟಿದ ವಿಹಂಗನ ಗರಿಯಂತೆ
ತಾಗುವ ಮೊನೆಗಾಧಾರವಾಗಿ
ದೂರ ಎಯಿದುವುದಕ್ಕೆ ಸಾಗಿಸುವ ಗುಣ ತಾನಾಗಿ
ಕ್ರೀ ಅರಿವಿನ ಭೇದದ ನೆರಿಗೆಯ ಕಾಬನ್ನಕ್ಕ
ಅರಿವು ಕುರುಹು ಎರಡೂ ಬೇಕೆಂದನಂಬಿಗ ಚೌಡಯ್ಯ

[ಅಂಬಿನ-ಬಾಣದ, ಹಿಳಿಕಿನಲ್ಲಿ-ಹಿಂಬದಿಯಲ್ಲಿ, ವಿಹಂಗನ ಹಕ್ಕಿಯ, ಕ್ರೀ-ಕ್ರಿಯೆ, ಕಾಬನ್ನಕ್ಕ-ಕಾಣುವವರೆಗೆ]

ಅಂಬಿಗರ ಚೌಡಯ್ಯನ ವಚನ, ಜ್ಞಾನ ಮತ್ತು ಕ್ರಿಯೆಗಳಿಗೆ ಇರುವ ಸಂಬಂಧವನ್ನು ಈ ವಚನ ವಿವರಿಸುತ್ತದೆ.

ಇಲ್ಲಿ ಒಂದು ರೂಪಕವಿದೆ. ಅದು ಬಾಣದ ರೂಪಕ. ಬಾಣದ ಹಿಳಿಕಿನಲ್ಲಿ ಹಕ್ಕಿಯ ಗರಿಯನ್ನು ಕಟ್ಟಿರುವುದುಂಟು. ಆ ಗರಿಯ ಕಾರ್‍ಯ ಏನೆಂದರೆ ಗುರಿಯನ್ನು ಮುಟ್ಟುವ ಮೊನೆಗೆ ಸಹಾಯಮಾಡುವುದು. ಹಿಂಬದಿಯ ಗರಿಯ ಬೆಂಬಲ, ಸಮತೋಲ ಇಲ್ಲದಿದ್ದರೆ ಬಾಣವು ದೂರ ಹೋಗದು.

ಹಾಗೆಯೇ ಕ್ರಿಯೆ ಎಂಬುದು ಬಾಣ, ಅರಿವು ಅನ್ನುವುದು ಬಾಣದ ಹಿಳಿಕಿನಲ್ಲಿರುವ ಗರಿ ಎಂದು ಚೌಡಯ್ಯ ಹೇಳುತ್ತಾನೆ. ಈ ಅರಿವು ಮತ್ತು ಕ್ರಿಯೆಯ ವ್ಯತ್ಯಾಸವನ್ನು, ಸಂಬಂಧವನ್ನು ಅರಿಯುವವರೆಗೆ ಅರಿವು, ಕುರುಹು (ಸಂಕೇತ, ಲಾಂಛನ) ಎಲ್ಲವೂ ಬೇಕು ಅನ್ನುತ್ತಾನೆ.

ಆಧುನಿಕ ಕಾಲದಲ್ಲಿ ಜ್ಞಾನ (ನಾಲೆಜ್) ಮತ್ತು ಕ್ರಿಯೆ (ಆಕ್ಷನ್) ಕುರಿತು, ಪ್ರಾಕ್ಟಿಸ್‌ ಮತ್ತು ಥಿಯರಿ ಕುರಿತು ಅನೇಕ ಚರ್ಚೆಗಳು ನಡೆದಿವೆ. ಆಧುನಿಕ ಪೂರ್‍ವ ಕಾಲದಲ್ಲಿ ಜ್ಞಾನ ಮತ್ತು ಕ್ರಿಯೆಗಳ ಸಂಬಂಧ ಕುರಿತು ನಡೆದ ಚರ್ಚೆಯ ನಿದರ್‍ಶನವಾಗಿ ಈ ವಚನ ಕಾಣುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...