Home / ಲೇಖನ / ಇತರೆ / ವಚನ ವಿಚಾರ – ಇದು ಇದ್ದರೆ ಅದು

ವಚನ ವಿಚಾರ – ಇದು ಇದ್ದರೆ ಅದು

ಅಂಬುವಿಲ್ಲದಿರ್‍ದಡೆ ಅಂಬುಜವನಾರು ಬಲ್ಲರು
ನೀರಿಲ್ಲದಿರ್‍ದಡೆ ಹಾಲನಾರು ಬಲ್ಲರು
ನಾನಿಲ್ಲದಿರ್‍ದಡೆ ನಿನ್ನನಾರು ಬಲ್ಲರು
ನಿನಗೆ ನಾ
ನನಗೆ ನೀ
ನಿನಗೂ ನನಗೂ ಬೇರೊಂದು ನಿಜವುಂಟೆ
ನಿಃಕಳಂಕ ಮಲ್ಲಿಕಾರ್‍ಜುನಾ

[ಅಂಬು-ನೀರು, ಅಂಬುಜ-ತಾವರೆ, ನೀರಿಲ್ಲದಿರ್‍ದಡೆ-ನೀರಿಲ್ಲದಿದ್ದರೆ]

ಇದು ಮೋಳಿಗೆ ಮಾರಯ್ಯನ ವಚನ. ಅರ್‍ಥ ಅನ್ನುವುದು ಇರುವುದು ದ್ವಂದ್ವಗಳಲ್ಲೇ. ವ್ಯತ್ಯಾಸಗಳೇ ಇರದಿದ್ದರೆ ಅರ್ಥವೂ ಇಲ್ಲ, ಬೇಕಾಗಿಲ್ಲ.

ಅಂಬು ಇರದಿದ್ದರೆ ಅಂಬುಜ ಯಾರಿಗೆ ಗೊತ್ತಾಗುತ್ತದೆ? ಹೇಗೆ ಇರುತ್ತದೆ? ನೀರು ಇರುವುದರಿಂದಲೇ ಹಾಲು ಅನ್ನುವ ಪದಾರ್‍ಥಕ್ಕೆ ಅರ್‍ಥ ಮತ್ತು ಬೆಲೆ. ನಾನೇ ಇರದಿದ್ದರೆ ನೀನು ಅನ್ನುವುದಕ್ಕೆ ಅರ್‍ಥವೆಲ್ಲಿ? ನಾನು ಇರದಿದ್ದರೆ ನಿನ್ನನ್ನು ಅರ್‍ಥಮಾಡಿಕೊಳ್ಳುವವರಾದರೂ ಯಾರು? ‘ನಾನು’ ಅನ್ನುವುದು ಇರುವುದರಿಂದಲೇ ‘ನೀನು’ ಅನ್ನುವುದಕ್ಕೆ ಅರ್‍ಥ. ನಿಜ. ಆದರೆ ಈ ಎಲ್ಲ ಇಮ್ಮೈ ದ್ವಂದ್ವಗಳಿಗೂ ಇರುವ ನಿಜ ಮಾತ್ರ ಒಂದೇ.

ನನಗೂ ನಿನಗೂ ಬೇರೊಂದು ನಿಜವುಂಟೆ ಎಂದು ದೇವರನ್ನು ಕೇಳುತ್ತಾನೆ. ನನ್ನ ಸತ್ಯ ಬೇರೆ, ನಿನ್ನ ಸತ್ಯ ಬೇರೆ ಅನ್ನುವುದು ನಿಜವಲ್ಲ. ಸತ್ಯ ಅನ್ನುವುದು ಒಂದೇ, ಎರಡೆಂಬಂತೆ ಕಾಣುವ ದ್ವಂದ್ವಗಳೆಲ್ಲಕ್ಕೂ ಸತ್ಯವೇ ಆಧಾರ. ಅದನ್ನು ಹೇಳುವುದಲ್ಲ ಕಾಣಲು ಸಾಧ್ಯವಾಗಬೇಕು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...