Home / ಲೇಖನ / ಇತರೆ / ವಚನ ವಿಚಾರ – ಇದು ಇದ್ದರೆ ಅದು

ವಚನ ವಿಚಾರ – ಇದು ಇದ್ದರೆ ಅದು

ಅಂಬುವಿಲ್ಲದಿರ್‍ದಡೆ ಅಂಬುಜವನಾರು ಬಲ್ಲರು
ನೀರಿಲ್ಲದಿರ್‍ದಡೆ ಹಾಲನಾರು ಬಲ್ಲರು
ನಾನಿಲ್ಲದಿರ್‍ದಡೆ ನಿನ್ನನಾರು ಬಲ್ಲರು
ನಿನಗೆ ನಾ
ನನಗೆ ನೀ
ನಿನಗೂ ನನಗೂ ಬೇರೊಂದು ನಿಜವುಂಟೆ
ನಿಃಕಳಂಕ ಮಲ್ಲಿಕಾರ್‍ಜುನಾ

[ಅಂಬು-ನೀರು, ಅಂಬುಜ-ತಾವರೆ, ನೀರಿಲ್ಲದಿರ್‍ದಡೆ-ನೀರಿಲ್ಲದಿದ್ದರೆ]

ಇದು ಮೋಳಿಗೆ ಮಾರಯ್ಯನ ವಚನ. ಅರ್‍ಥ ಅನ್ನುವುದು ಇರುವುದು ದ್ವಂದ್ವಗಳಲ್ಲೇ. ವ್ಯತ್ಯಾಸಗಳೇ ಇರದಿದ್ದರೆ ಅರ್ಥವೂ ಇಲ್ಲ, ಬೇಕಾಗಿಲ್ಲ.

ಅಂಬು ಇರದಿದ್ದರೆ ಅಂಬುಜ ಯಾರಿಗೆ ಗೊತ್ತಾಗುತ್ತದೆ? ಹೇಗೆ ಇರುತ್ತದೆ? ನೀರು ಇರುವುದರಿಂದಲೇ ಹಾಲು ಅನ್ನುವ ಪದಾರ್‍ಥಕ್ಕೆ ಅರ್‍ಥ ಮತ್ತು ಬೆಲೆ. ನಾನೇ ಇರದಿದ್ದರೆ ನೀನು ಅನ್ನುವುದಕ್ಕೆ ಅರ್‍ಥವೆಲ್ಲಿ? ನಾನು ಇರದಿದ್ದರೆ ನಿನ್ನನ್ನು ಅರ್‍ಥಮಾಡಿಕೊಳ್ಳುವವರಾದರೂ ಯಾರು? ‘ನಾನು’ ಅನ್ನುವುದು ಇರುವುದರಿಂದಲೇ ‘ನೀನು’ ಅನ್ನುವುದಕ್ಕೆ ಅರ್‍ಥ. ನಿಜ. ಆದರೆ ಈ ಎಲ್ಲ ಇಮ್ಮೈ ದ್ವಂದ್ವಗಳಿಗೂ ಇರುವ ನಿಜ ಮಾತ್ರ ಒಂದೇ.

ನನಗೂ ನಿನಗೂ ಬೇರೊಂದು ನಿಜವುಂಟೆ ಎಂದು ದೇವರನ್ನು ಕೇಳುತ್ತಾನೆ. ನನ್ನ ಸತ್ಯ ಬೇರೆ, ನಿನ್ನ ಸತ್ಯ ಬೇರೆ ಅನ್ನುವುದು ನಿಜವಲ್ಲ. ಸತ್ಯ ಅನ್ನುವುದು ಒಂದೇ, ಎರಡೆಂಬಂತೆ ಕಾಣುವ ದ್ವಂದ್ವಗಳೆಲ್ಲಕ್ಕೂ ಸತ್ಯವೇ ಆಧಾರ. ಅದನ್ನು ಹೇಳುವುದಲ್ಲ ಕಾಣಲು ಸಾಧ್ಯವಾಗಬೇಕು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...