Home / ಲೇಖನ / ಇತರೆ / ಕೆ ಕೃಷ್ಣಪ್ಪನವರು

ಕೆ ಕೃಷ್ಣಪ್ಪನವರು

ಅಂದು ಶಾಲೆಗೆ ಲೇಟ್ ಕೆಂಚಪ್ಪ ಅವರ ಮಗ ಕೆ. ಕೃಷ್ಣಪ್ಪ ಅವರು ಇತ್ತೀಚೆಗೆ ವಿದೇಶದಿಂದ ಬಂದಿದ್ದರು.

ಕೆ. ಕೃಷ್ಣಪ್ಪನವರು- ಸಾರಿಗೆ ಸಂಸ್ಥೆಯ ಮುದ್ರಣಾಲಯದಲ್ಲಿ ಹಿರಿಯ ಮ್ಯಾಕ್ಯಾನಿಕ್ ಇಂಜಿನಿಯರ್ ಆಗಿ ದಕ್ಷತೆ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಅವರನ್ನು ಶಾಲಾ ಶಿಕ್ಷಕರೆಲ್ಲ ಮಕ್ಕಳೆಲ್ಲ ಸೇರಿ ಏನನ್ನಾದರೂ ವಿದೇಶದ ಸುದ್ದಿಯೊಂದನ್ನು ಹೇಳಬೇಕೆಂದು ವಿನಂತಿಸಿದರು. ಅಪಾರ ಅನುಭವ ಸೇವಾ ಹಿರಿತನದ ಹಿರಿಯ ವಿಶ್ವಚೇತನವೆಂದೇ ಖ್ಯಾತರಾದ ಶ್ರೀಯುತ ಕೆ. ಕೃಷ್ಣಪ್ಪನವರು ಎದ್ದು ನಿಂತು- ತಾವು ವಿದೇಶದಿಂದ ತಂದಿದ್ದ “ವೈರ್‌ಲೆಸ್ ಪೋಡೊ…”ವನ್ನು ಎಲ್ಲರಿಗೆ ಕುತೂಹಲದಿಂದ ತೋರಿಸುತ್ತಾ ಹೋದರು. ಹೊಚ್ಚ ಹೊಸ ಸೆಟ್ ಅದು! ತಂತ್ರಜ್ಞಾನದ ಉತ್ಕೃಷ್ಟ ಕೊಡುಗೆಯದು ಕೆ. ಕೃಷ್ಣಪ್ಪನವರು ಮಾತಿಗಾರಂಭಿಸಿದರು…

ಓ ನನ್ನ… ಮುದ್ದು ಮಕ್ಕಳೆ… ನೀವೆಲ್ಲ ವೈರ್‌ಲೆಸ್ ಪೋಡೊವನ್ನು ಈಗ ನೋಡಿದಿರಲ್ಲಾ…?! ಇನ್ನು ಮುಂದೆ ಸೆಲ್‌ಫೋನ್ ಕೈಲಿಡಿದು ಸೆಲ್ಫಿಗೆ ಲುಕ್ ಕೊಡುವುದೂ ತುಸು ಇಬ್ಬಂದಿನೇ… ಅಪಾಯನೇ ಎಷ್ಟೋ ಜನರು ಪ್ರಾಣ ಕಳೆದುಕೊಂಡಿರುವರೂ… ಕೂಡಾ. ಅದೂ ನಿಖರವಾಗಿ ಬರುವುದೆಂದೂ ಖಾತ್ರಿ ಇಲ್ಲ! ಇಂಥಾ ಪುಟ್ಟ ಸಮಸ್ಯೆಯನ್ನು ದೂರ ಮಾಡಲು ಬಂದ ‘ಸೆಲ್ಫಿಸ್ಟಿಕ್’ ಕೂಡಾ ತುಂಬಾ ಓಲ್ಡಾಯಿತು..!!

ಈಗೀಗ ದೇಶ ವಿದೇಶಗಳಲ್ಲಿ ತೀರಾ ಸದ್ದುಗದ್ದಲ ಮಾಡುತ್ತಿರುವುದು ವೈರ್‌ಲೆಸ್ ಪೋಡೊ.. ಈಗೋ ನನ್ನ ಕೈಲಿರುವ ವೈರ್‌ಲೆಸ್ ಪೋಡೊ… ಇದು ಬ್ಲೂಟೂತ್ ರೀತಿಯಲ್ಲಿ ಕೆಲಸ ಮಾಡುವುದು. ಈಗೋ ಇದರ ಹಿಂಬದಿಗೆ ಮ್ಯಾಗ್ನೆಟ್ ಇದ್ದು ಎಲ್ಲಿ ಬೇಕಾದಲ್ಲಿ ಸಿಕ್ಕಿಸಲು ಕ್ಲಿಕ್ಕಿಸಲು ಸಾಧ್ಯವಿದೆ. ತದನಂತರ ನಿಮ್ಮ ಸೆಲ್‌ಫೋನ್‌ಗೆ ಕನೆಕ್ಟ್ ಮಾಡಿಕೊಳ್ಳಬಹುದು!

ವಿಡಿಯೋ ಗ್ರೂಪ್ ಫಿ ಕೂಡಾ ಸಾಧ್ಯ! ಹೀಗಾಗಿ ಬೇರೊಬ್ಬರಿಗೆ ಫೋಟೋ ತೆಗೆಯಿರಿ ಎಂದು ದುಂಬಾಲು ಬೀಳುವುದೂ ಇರುವುದಿಲ್ಲ ಎಂದು ಕೆ. ಕೃಷ್ಣಪ್ಪನವರು ಬಾಳ ಚೆಂದಾಗಿ ವಿವರಿಸುತ್ತಾ ನಿಂತರು.

ಅಲ್ಲಿದ್ದವರೆಲ್ಲ ಬಲು ಕುತೂಹಲದಿ ಕೇಳುತ್ತಾ ಕುಳಿತರು. ಇವರ ಮಾತೆಂದರೆ ಹಾಲು ಜೇನು ಸವಿಸವಿ ಕಲ್ಲು ಸಕ್ಕರೆ ಎಲ್ಲರಿಗೆ ಅವರೆಂದರೆ… ಅಕ್ಕರೆ….

ಹೌದು! ಪುಟ್ಟದಾದ ಅಂದಚೆಂದದ ಈ ವೈರ್‌ಲೆಸ್‌ ಪೋಡೊವನ್ನು ನೀವೆಲ್ಲ ಸುಲಭವಾಗಿ ನಿಮ್ಮೊಂದಿಗೆ ಎಲ್ಲಿಗೆ ಬೇಕಾದರೂ ಜೊತೆ ಜೊತೆಯಲ್ಲಿ ತೀರಾ ಸರಳವಾಗಿ ತೆಗೆದುಕೊಂಡು ಹೋಗಬಹುದು. ಏಕೆಂದರೆ ನೀವೂ ಎಲ್ಲಿ ಬೇಕಾದರೂ ನಿಂತು ಕುಂತು ಲುಕ್ ಕೊಟ್ಟರೆ ಸಾಕು ಅದರಷ್ಟಕ್ಕೆ ಅದೇ ಫೋಟೋ ತೆಗೆಯುವುದು! ಹೀಗಿದೆ ಪೋಡೊ.. ಮಹಿಮೆ?! ಕೃಷ್ಣಪ್ಪನವರ ಮಾತಿನ ಮೋಡಿನ ಹಾಗೇ ಮುತ್ತಿನ ಹಾರದಾ ಹಾಗೇ. ಮಾಣಿಕ್ಯದ ದೀಪ್ತಿಯಾ ಹಾಗೇ… ಅಲ್ಲಿದ್ದವರೆಲ್ಲ ಹೌದೌದು ಎಂದರು.

ಎಲ್ಲರ ಕೈಯಲ್ಲಿರುವ ಸೆಲ್ ಫೋನ್‌ಗಳ ದರಗಳಂತೇ ಇದೂ ಕೂಡಾ ಹೆಚ್ಚಿನ ದರವಿಲ್ಲ! ಹೆಚ್ಚಿನ ಉಪಯೋಗವಿದೆಯೆಂದೂ.. ಕೆ.ಕೃಷ್ಣಪ್ಪನವರು ವಿವರಿಸುತ್ತಾ ನಿಂತರು. ಹೊತ್ತು ಹೋಗಿದ್ದು ಗೊತ್ತೇ ಆಗಲಿಲ್ಲ. ಹೊಸ ಹೊಸ ವಿಚಾರ ಹೊಚ್ಚ ಹೊಸತು ಪೋಡೊ….

ಅಲ್ಲಿದ್ದವರೆಲ್ಲ ಹರ್ಷದಿ ಚಪ್ಪಾಳೆ ತಟ್ಟಿದರಲ್ಲದೆ, ಅವರನ್ನು ಸನ್ಮಾನಿಸಿದರು. ಅಲ್ಲಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...