Home / ಬಾಲ ಚಿಲುಮೆ / ಕಥೆ / ಹೆಚ್ಚು ಬುದ್ಧಿವಂತರು ಯಾರು?

ಹೆಚ್ಚು ಬುದ್ಧಿವಂತರು ಯಾರು?

ಬೆಂಗಳೂರೆಂಬ ಪಟ್ಟಣದಲ್ಲಿದ್ದ ರಾಜಕುಮಾರ ಬಡಿಗೇರ, ಜಯಪ್ಪ, ಶಂಕರ್‌ ಗುಡಿಮನಿ- ಮೂವರು ಸೇರಿ ತಮ್ಮಳ್ಳಿಗೆ ಮಕರ ಸಂಕ್ರಾಂತಿ ಹಬ್ಬಕ್ಕೆ ಕಾರಿನಲ್ಲಿ ತೆರಳಿದರು.

ಹಳ್ಳಿಯಲ್ಲಿ ಬಾಲ್ಯದ ಗೆಳೆಯ ಲಕ್ಷ್ಮಣ ಪಾತ್ರೋಟನೊಂದಿಗೆ ಹೊಲ, ಗದ್ದೆ, ತೋಟ, ಹಳ್ಳ, ಕೊಳ್ಳ, ಬಾವಿ ಸುತ್ತಲು ಹೋದರು.

ಅಲ್ಲೊಂದು ಹಳ್ಳದ ಪೊದೆಯಲ್ಲಿ ಅಸ್ಥಿಪಂಜರವೊಂದು ಬಿದ್ದಿತ್ತು. ಎಲ್ಲರೂ ಅದನ್ನು ನೋಡಿ ದಂಗುಬಡಿದು ಹೋದರು.

ಅದಕ್ಕೆ ಲಕ್ಷ್ಮಣ ಪಾತ್ರೋಟ್ ಹೇಳಿದ ‘ಗೆಳೆಯರೆ… ಆ ಆಸ್ಥಿಪಂಜರದ ಗೊಡವೆ ನಮಗೇಕೆ? ನಾಳೆ ಸಂಕ್ರಾಂತಿ ಹಬ್ಬವಿದೆ. ಸ್ನಾನ, ಪೂಜೆ, ಕಬ್ಬು, ಸಿಹಿಗೆಣಸು, ಅವರೆಕಾಯಿ, ನೆಲಗಡಲೆ, ಹೂವುಹಣ್ಣು, ಬೂದುಗುಂಬಳಕಾಯಿ ಇತ್ಯಾದಿ ಹೊತ್ತು ಹೋಗುವ, ಅದನ್ನು ಅಲ್ಲೇ ಬಿಸಾಕಿ ಅದರ ಸುದ್ದಿಗದ್ದಲ ನಮಗೇಕೆ?’ ಎಂದು ಕೈಮುಗಿದು ನಿಂತ.

ರಾಜಕುಮಾರ್‌ ಬಡಿಗೇರ ಆ ಆಸ್ಥಿಪಂಜರವನ್ನೆಲ್ಲ ಫೂನರ್‌ ನಿರ್ಮಾಣ ಮಾಡಿ ಸಂಭ್ರಮಿಸಿದ.

‘ನಾನೇನು ಕಡಿಮೆನೇ…’ ಎಂದು ಶಂಕರ್ ಗುಡಿಮನಿ ಅದಕ್ಕೆ ರಕ್ತ, ಮಾಂಸ, ಆಕಾರ ನೀಡಿಯೇ ಬಿಟ್ಟ!

ಆಹಾ ಅದಕ್ಕೆ ಉಸಿರು ಜೀವ ತುಂಬಿದ ಜಯಪ್ಪ!

ಅಬ್ಬಾ! ಪಿಶಾಚಿಯೊಂದು ಭೂಮಿ ಆಕಾಶದೆತ್ತರ ಎದ್ದು ನಿಂತು- ‘ನನ್ನ ಬದುಕಿಸಿದವರ್‍ಯಾರು? ಮೊದಲು ಅವರನ್ನು ನುಂಗಿ ಬಿಡುವೆ’ ಎಂದು ಮೂವರನ್ನು ನುಂಗಿ ನೀರು ಕುಡಿಯಿತು.

ಇತ್ತ ಪರಿಣಾಮದ ಅರಿವು ಊಹಿಸಿ ಆಗಲೆ ಊರ ಕಡೆ ಓಟ ಕಿತ್ತಿದ್ದ… ಲಕ್ಷ್ಮಣ ಪಾತ್ರೋಟ ಮಹಾ ಬುದ್ಧಿವಂತನೆನಿಸಿದ್ದ!

ಹಳ್ಳಿ ಮನುಷ್ಯ… ಓಡೋಡಿ ಮನೆ ಸೇರಿದ್ದ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...