Home / ಬಾಲ ಚಿಲುಮೆ / ಕಥೆ / ಕಹಿಸಿಹಿ ಕತೆ

ಕಹಿಸಿಹಿ ಕತೆ

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ವಿಜಯನಗರ ಸಾಮ್ರಾಜ್ಯ ಆರಂಭದಲ್ಲೇ ಉತ್ತರ ಭಾರತದ ಕಳಿಂಗ ದೇಶದವರೆಗೂ ಸಿದ್ಧಿ ಪ್ರಸಿದ್ಧಿ ಹೊಂದಿತ್ತು!

ವಿಜಯನಗರ ಸಾಮ್ರಾಜ್ಯವನ್ನು ತೌಳವ ನರಸನಾಯಕ ಅಳುತ್ತಿದ್ದ. “ಅಧಾರ್ಮಿಕರಾದ ಮಹಾರಾಜರು ಎಂದೂ ಶ್ರೇಯಸ್ಸು ಹೊಂದಲಾರರು” ಎಂಬ ಒಂದೇ ಒಂದು ಮೂಲ ಮಂತ್ರದಿಂದ ಇಡೀ ಭರತ ಖಂಡದೆಲ್ಲಲ್ಲ ವಿಜಯನಗರ ಸಾಮ್ರಾಜ್ಯ ಪ್ರಭುದ್ಧ ಮಾನಕ್ಕೆ ಬಂತು.

ಇತ್ತ- ಕಳಿಂಗ ದೇಶದ ಬಸವಭಟ್ಟನೆಂಬ ಉದ್ದಾಮ ಪಂಡಿತರತ್ನ ಆಸ್ಥಾನದ ಪಂಡಿತ ಪಾಮರ ಉತ್ತರ ಭಾರತದಿಂದ ದಕ್ಷಿಣ ಭಾರತದ ಕಡೆಗೆ ಬರೀ ವಾದವಿವಾದ ಮಾಡುತ್ತಾ ಪಾಂಡಿತ್ಯತನ ಪ್ರದರ್ಶಿಸುತ್ತಾ ಎಲ್ಲ ರಾಜ್ಯಗಳನ್ನು ಗೆಲ್ಲುತ್ತಾ ಮೀಸೆ ತಿರುವುತ್ತಾ ಹೊಗಳು ಭಟ್ಟರನ್ನು ಹಿಂದಿಟ್ಟುಕೊಂಡು ವಿಜಯನಗರ ಸಾಮ್ರಾಜ್ಯಕ್ಕೆ ಒಂದು ದಿನ ಎಡಗಾಲಿಟ್ಟು ವಾದ್ಯ ಮೇಳ, ಶಂಕು, ಜಾಗಟೆ, ತುತ್ತೂರಿ ಮೇಲು ಪಂಚಾಂಗವನ್ನು ಓದುತ್ತಾ ಮೆರವಣಿಗೆಯಲ್ಲಿ ಜಯಘೋಷ ಮೊಳಗಿಸುತ್ತಾ ಬಸವಭಟ್ಟ ವಿಜಯನಗರ ಸಾಮ್ರಾಜ್ಯವನ್ನು ಪ್ರವೇಶಿಸಿದ.

ಇಡೀ ವಿಜಯನಗರ ಸಾಮ್ರಾಜ್ಯ ಅಲ್ಲಾಡಿ ಸದ್ದಡಗಿತು! ಉತ್ತರದಿಂದ ದಕ್ಷಿಣದವರೆಗೆ ಬಸವ ಭಟ್ಟನನ್ನು ಗೆದ್ದ ರಾಜ ಮಹಾರಾಜರಿಲ್ಲ! ಹೋಗಲಿ ಉದ್ದಾಮ ಪಂಡಿತ ಪಾಮರರಿಲ್ಲ. ಶರಣಾಗತಿಯೊಂದೇ ಈಗಿರುವ ಮಾರ್ಗವೆಂದು ರಾಜಾಧಿರಾಜ ತೌಳವ ನರಸನಾಯಕ ತಲೆಗೆ ಕೈಹೊತ್ತು ಕುಳಿತೇ ಬಿಟ್ಟ!

ಒಂದು ದಿನ- ಬಸವಭಟ್ಟರಿಗೂ ವ್ಯಾಸರಾಜರಿಗೂ ವಾದ ವಿವಾದ ಶುರುವಾಯಿತು. ಎರಡು ಹಗಲು ಮೂರು ರಾತ್ರಿ ತರ್ಕಬದ್ಧ ವಾದ ಸರಣಿಯು ಸಾಗಿತು! ವೇದವೇದಾಂತ ತರಂಗಗಳಲ್ಲಿ ಪರಿಪೂರ್ಣರಾಗಿದ್ದ ವ್ಯಾಸರಾಜರು ತಮ್ಮ ತತ್ವಸಿದ್ಧಾಂತ ಪ್ರಮಾಣ ಬದ್ಧವಾದ ವಾದವಿವಾದಗಳಲ್ಲಿ ಸಂಪೂರ್ಣವಾಗಿ ಗೆದ್ದರು! ಬಸವಭಟ್ಟರು ಸೋತು ಶರಣಾದರು.

ಅದಕ್ಕೆ ಪ್ರತಿಯಾಗಿ ತೌಳವ ನರಸನಾಯಕ ಬಸವಭಟ್ಟರನ್ನು ಅವರಿಂದೆ ಬಂದಿದ್ದ ಹೊಗಳುಭಟ್ಟರನ್ನು ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಕಣ್ಣೀರಿಟ್ಟು- ‘ಅಯ್ಯೋ ನಮ್ಮನ್ನು ಮನ್ನಿಸಿ, ನಮ್ಮ ಕಳಿಂಗ ದೇಶದ ರಾಜನಿಂದ ಪ್ರೇರೇಪಿತನಾಗಿ ನಮ್ಮ ಶಿಷ್ಯರೊಡಗೂಡಿ ನಿಮ್ಮನ್ನು ನಿಮ್ಮ ಸಾಮ್ರಾಜ್ಯವನ್ನು ಅವಮಾನಿಸಿ ಹೀಯಾಳಿಸಬೇಕೆಂದು ದುಷ್ಟಾಲೋಚನೆ ಇಟ್ಟುಗೊಂಡು ಬಂದವನನ್ನು ಸನ್ಮಾನಿಸಿದ್ದು ಕಣ್ಣು ತೆರೆಸಿದೆ. ನಮ್ಮನ್ನೆಲ್ಲ ಮನ್ನಿಸಿ’ ಎಂದು ಶ್ರೀಪಂಚಿಯ ಲಿಂಗವನ್ನು ಪ್ರೀತಿಪೂರ್ವಕವಾಗಿ ಬಸವಭಟ್ಟ ನೀಡಿದ.

ಅದಕ್ಕೆ ನರಸನಾಯಕ ‘ವಿಜಯನಗರ ಸಾಮ್ರಾಜ್ಯದಲ್ಲಾದ ಕಹಿಯನ್ನು ಇಲ್ಲೇ ಬಿಟ್ಟು ಸನ್ಮಾನವೆಂಬ ಸಿಹಿಯೊಂದಿಗೆ ಕಳಿಂಗ ದೇಶವನ್ನು ತಲುಪಿ’ ಎಂದು ಎಲ್ಲರೆದುರಿಗೆ ಬೆನ್ನುತಟ್ಟಿ ಕಳಿಸಿಕೊಟ್ಟ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...