Home / ಲೇಖನ / ಇತರೆ / ವಚನ ವಿಚಾರ – ಮನಸೇ ಇಲ್ಲ, ಕನಸಿನ್ನೆಲ್ಲಿ

ವಚನ ವಿಚಾರ – ಮನಸೇ ಇಲ್ಲ, ಕನಸಿನ್ನೆಲ್ಲಿ

ಅಗಲಿದ ನಲ್ಲನ ಕನಸಿನಲಪ್ಪಿ ಸುಖಿಯಾದಿರವ್ವಾ
ಕಂಡ ಕನಸು ದಿಟವಾದಡೆ ಅವ ನಮ್ಮ ನಲ್ಲನವ್ವಾ
ಮನಸುಳ್ಳವರು ನೀವು ಪುಣ್ಯಗೈದಿರವ್ವಾ
ಮಹಾಲಿಂಗ ಗಜೇಶ್ವರನನಗಲಿದಡೆ
ನಿದ್ರೆಯೆಮಗಿಲ್ಲ
ಕನಸಿನ್ನೆಲ್ಲಿ ಬಹುದವ್ವಾ

[ದಿಟವಾದಡೆ-ನಿಜವಾದರೆ]

ಉರಿಲಿಂಗದೇವನ ವಚನ. ತನ್ನನ್ನು ಹೆಣ್ಣು ಎಂದು ಭಾವಿಸಿಕೊಂಡು ಹೇಳಿರುವ ವಚನ.

ನೀವು ಪುಣ್ಯವಂತರು. ನಲ್ಲ ಅಗಲಿದರೆ ಅವನ ಕನಸು ಕಂಡು ಸುಖಿಯಾಗುತ್ತೀರಿ. ಕನಸು ದಿಟವಾದರೆ ಮಾತ್ರ ನನ್ನ ನಲ್ಲ ನಿಜ. ನೀವು ಪುಣ್ಯವಂತರು. ಯಾಕೆಂದರೆ ನಿಮ್ಮ ಮನಸ್ಸು ನಿಮ್ಮ ಬಳಿ ಇದೆ, ಇಲ್ಲದ ನಲ್ಲನ ಕನಸು ತೋರುತ್ತದೆ. ಮನಸ್ಸನ್ನು ಮಹಾಲಿಂಗ ಗಜೇಶ್ವರನಿಗೆ ಕೊಟ್ಟಿರುವುದರಿಂದ ನನಗೆ ಮನಸ್ಸೂ ಇಲ್ಲ, ಆದ್ದರಿಂದಲೇ ಕನಸೂ ಇಲ್ಲ.

ಮನಸ್ಸು ಕೊಟ್ಟೆ. ಅವನು ಸಿಗಲಿಲ್ಲ. ಅವನೊಡನೆಯೇ ನನ್ನ ಮನಸೂ ಕನಸೂ ಹೋಗಿಬಿಟ್ಟಿವೆ ಎಂಬುದು ಕೇವಲ ಚೆಲುವಾದ ಮಾತುಗಳು ಮಾತ್ರವಲ್ಲ. ಅನುಭವದ ಬಗ್ಗೆ ಮಾತನಾಡಿಕೊಳ್ಳುವುದರ ಸುಳ್ಳುತನವನ್ನು ಕುರಿತದ್ದು. ಮತ್ತೂ ಮನಸು, ಕನಸು ಎರಡೂ ಇಲ್ಲವಾದ ತಹತಹ, ತಳಮಳವನ್ನು ಕುರಿತದ್ದು.

ಕೇವಲ ಅಕ್ಕ ಮಾತ್ರವಲ್ಲ, ಅನೇಕ ವಚನಕಾರರು ತಮ್ಮನ್ನು ಹೆಣ್ಣು ಎಂದು ಭಾವಿಸಿ ತಮ್ಮ ಮತ್ತು ದೇವರ ಸಂಬಂಧ ಕುರಿತು ಹೇಳಿಕೊಂಡಿದ್ದಾರೆ. ಭಕ್ತಿಯ ಹೆಣ್ಣು ಮುಖ ಅರಿಯಲು ಹೆಣ್ಣೆ ಯಾಕಾಗಬೇಕು, ಹೆಣ್ಣು ಮನಸು ಸಾಕು!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...