Home / ಲೇಖನ / ಇತರೆ / ವಚನ ವಿಚಾರ – ಮನಸೇ ಇಲ್ಲ, ಕನಸಿನ್ನೆಲ್ಲಿ

ವಚನ ವಿಚಾರ – ಮನಸೇ ಇಲ್ಲ, ಕನಸಿನ್ನೆಲ್ಲಿ

ಅಗಲಿದ ನಲ್ಲನ ಕನಸಿನಲಪ್ಪಿ ಸುಖಿಯಾದಿರವ್ವಾ
ಕಂಡ ಕನಸು ದಿಟವಾದಡೆ ಅವ ನಮ್ಮ ನಲ್ಲನವ್ವಾ
ಮನಸುಳ್ಳವರು ನೀವು ಪುಣ್ಯಗೈದಿರವ್ವಾ
ಮಹಾಲಿಂಗ ಗಜೇಶ್ವರನನಗಲಿದಡೆ
ನಿದ್ರೆಯೆಮಗಿಲ್ಲ
ಕನಸಿನ್ನೆಲ್ಲಿ ಬಹುದವ್ವಾ

[ದಿಟವಾದಡೆ-ನಿಜವಾದರೆ]

ಉರಿಲಿಂಗದೇವನ ವಚನ. ತನ್ನನ್ನು ಹೆಣ್ಣು ಎಂದು ಭಾವಿಸಿಕೊಂಡು ಹೇಳಿರುವ ವಚನ.

ನೀವು ಪುಣ್ಯವಂತರು. ನಲ್ಲ ಅಗಲಿದರೆ ಅವನ ಕನಸು ಕಂಡು ಸುಖಿಯಾಗುತ್ತೀರಿ. ಕನಸು ದಿಟವಾದರೆ ಮಾತ್ರ ನನ್ನ ನಲ್ಲ ನಿಜ. ನೀವು ಪುಣ್ಯವಂತರು. ಯಾಕೆಂದರೆ ನಿಮ್ಮ ಮನಸ್ಸು ನಿಮ್ಮ ಬಳಿ ಇದೆ, ಇಲ್ಲದ ನಲ್ಲನ ಕನಸು ತೋರುತ್ತದೆ. ಮನಸ್ಸನ್ನು ಮಹಾಲಿಂಗ ಗಜೇಶ್ವರನಿಗೆ ಕೊಟ್ಟಿರುವುದರಿಂದ ನನಗೆ ಮನಸ್ಸೂ ಇಲ್ಲ, ಆದ್ದರಿಂದಲೇ ಕನಸೂ ಇಲ್ಲ.

ಮನಸ್ಸು ಕೊಟ್ಟೆ. ಅವನು ಸಿಗಲಿಲ್ಲ. ಅವನೊಡನೆಯೇ ನನ್ನ ಮನಸೂ ಕನಸೂ ಹೋಗಿಬಿಟ್ಟಿವೆ ಎಂಬುದು ಕೇವಲ ಚೆಲುವಾದ ಮಾತುಗಳು ಮಾತ್ರವಲ್ಲ. ಅನುಭವದ ಬಗ್ಗೆ ಮಾತನಾಡಿಕೊಳ್ಳುವುದರ ಸುಳ್ಳುತನವನ್ನು ಕುರಿತದ್ದು. ಮತ್ತೂ ಮನಸು, ಕನಸು ಎರಡೂ ಇಲ್ಲವಾದ ತಹತಹ, ತಳಮಳವನ್ನು ಕುರಿತದ್ದು.

ಕೇವಲ ಅಕ್ಕ ಮಾತ್ರವಲ್ಲ, ಅನೇಕ ವಚನಕಾರರು ತಮ್ಮನ್ನು ಹೆಣ್ಣು ಎಂದು ಭಾವಿಸಿ ತಮ್ಮ ಮತ್ತು ದೇವರ ಸಂಬಂಧ ಕುರಿತು ಹೇಳಿಕೊಂಡಿದ್ದಾರೆ. ಭಕ್ತಿಯ ಹೆಣ್ಣು ಮುಖ ಅರಿಯಲು ಹೆಣ್ಣೆ ಯಾಕಾಗಬೇಕು, ಹೆಣ್ಣು ಮನಸು ಸಾಕು!
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...