ವಚನ ವಿಚಾರ – ಅತಿಮಥನ

ವಚನ ವಿಚಾರ – ಅತಿಮಥನ

ಅತಿಮಥನವೆಂಬ ಯೋಗವೆನ್ನ ಗತಿಗೆಡಿಸಿತ್ತಯ್ಯ
ದಿತಿಗೆಟ್ಟೆ ನಾನು ಅದರಿಂದ
ಅತಿಶಯದ ತಾತ್ಪರ್ಯ ಗುರುಭಕ್ತಿಯನರಿಯದೆ
ದಿತಿಗೆಟ್ಟೆನಯ್ಯ ತಾತ್ಪರ್‍ಯವನರಿಯದೆ
ತವಕಿಸುವ ಮನವನು ನಿಮ್ಮ ಕಡೆಗೆ ತೆಗೆದುಕೊಂಡು
ಅತಿಶಯದ ತಾತ್ಪರ್ಯ ಗುರುಭಕ್ತಿಯ ಈಯಯ್ಯಾ
ಕಪಿಲಸಿದ್ಧಮಲ್ಲಿಕಾರ್‍ಜುನಾ

[ಅತಿಮಥನ- ಅತಿಯಾದ ವಿಶ್ಲೇಷಣೆ, ದಿತಿಗೆಟ್ಟೆ-ಧೃತಿಗೆಟ್ಟೆ, ಗತಿ-ಚಲನೆ, ಬಾಳು, ಭವಿಷ್ಯ]

ಸಿದ್ಧರಾಮನ ವಚನ. ಇದು ಅತಿಯಾದ ವಿಶ್ಲೇಷಣೆಯ ಅಪಾಯವನ್ನು ಕುರಿತು ಹೇಳುವಂತಿದೆ. ಅತಿಮಥನದ ಪ್ರವೃತ್ತಿಯು ಮನಸ್ಸಿನ ನೆಮ್ಮದಿಯನ್ನು ಕೆಡಿಸುತ್ತದೆ. ಮಥನ ಅನ್ನುವುದು ಅಗತ್ಯ; ಆದರೂ ಅದು ಅತಿ ಆದಾಗ ತೊಂದರೆಕೊಡುವುದು ಖಚಿತ. ಸಿದ್ಧರಾಮನಂತೆಯೇ ಅಲ್ಲಮ ಕೂಡ ವಿಚಾರವೆಂಬುದು ಸಂದೇಹಕ್ಕೆ ಒಳಗು ಎನ್ನುತ್ತಾನೆ.

ಅತಿಯಾದ ಮಥನ ನನ್ನ ಗತಿಯನ್ನು ಕೆಡಿಸಿತ್ತು. ಆದ್ದರಿಂದಲೇ ಅತಿಶಯದ, ವಿಶೇಷವಾದ, ಆಶ್ಚರ್ಯಕರವಾದ, ಬಲು ನೆಮ್ಮದಿಯನ್ನು ತರುವ ಗುರು ಭಕ್ತಿಯನ್ನು ಅರಿಯದೆ ಹೋದೆ. ಗುರು ಭಕ್ತಿ ಅನ್ನುವುದನ್ನು ದೊಡ್ಡದಾದುದರ ಬಗ್ಗೆ ಇರುವ ವಿನಯವೆಂದೂ ಅರ್ಥಮಾಡಿಕೊಳ್ಳಬಹುದು. ಗುರುವಿನ ಬಗ್ಗೆ ಭಕ್ತಿ ಇಲ್ಲದೆ, ಅತಿ ಮಥನದಲ್ಲಿ ತೊಡಗಿ, ಗತಿಗೆಟ್ಟ ನನ್ನ ಮನಸ್ಸನ್ನು ದೇವರು ತನ್ನತ್ತ ತಿರುಗಿಸಿಕೊಂಡು ಎಲ್ಲ ಅರ್ಥದ ಸಾರಾಂಶರೂಪವಾಗಿರುವ ಗುರುಭಕ್ತಿಯನ್ನು ಕೊಡಲಿ ಎಂದು ಪ್ರಾರ್ಥಿಸುತ್ತಾನೆ ಸಿದ್ಧರಾಮ.

ದೇವರು ದೊಡ್ಡವನೇ ಇರಬಹುದು, ಆದರೆ ಕಣ್ಣಿಗೆ ಕಾಣುವ ‘ದೊಡ್ಡ’ ಸಂಗತಿಗಳ ಬಗ್ಗೆ ವಿನಯ, ಭಕ್ತಿ ಇರದಿದ್ದರೆ ನಿಜವಾಗಿ ದೊಡ್ಡವನಾದ ದೇವರು ಸಿಕ್ಕಲಾರ. ಅತಿಮಥನ ಎಂದೂ ನಿಲುಗಡೆಗೆ ಬಾರದು. ಎಲ್ಲ ಮಥನದ ಉದ್ದೇಶವೂ ಒಂದು ನಿರ್ಣಯವನ್ನು ತಲುಪುವುದೇ ತಾನೇ? ಹಾಗೆ ನಿಜವಾದ ತಾತ್ಪರ್ಯವೆಂದರೆ ಗುರುವಿನ ಕುರಿತ ಭಕ್ತಿ, ಅದು ಮಥನದಿಂದ ಅಲ್ಲ, ವಿಶ್ವಾಸದಿಂದ ಮೂಡುವುದು. ಅದು ಬೇಕು ಅನ್ನುತ್ತಾನೆ ಸಿದ್ಧರಾಮ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚು
Next post ಏಕಾಂಗಿ

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

cheap jordans|wholesale air max|wholesale jordans|wholesale jewelry|wholesale jerseys