Home / ಲೇಖನ / ಇತರೆ / ವಚನ ವಿಚಾರ – ಅತಿಮಥನ

ವಚನ ವಿಚಾರ – ಅತಿಮಥನ

ಅತಿಮಥನವೆಂಬ ಯೋಗವೆನ್ನ ಗತಿಗೆಡಿಸಿತ್ತಯ್ಯ
ದಿತಿಗೆಟ್ಟೆ ನಾನು ಅದರಿಂದ
ಅತಿಶಯದ ತಾತ್ಪರ್ಯ ಗುರುಭಕ್ತಿಯನರಿಯದೆ
ದಿತಿಗೆಟ್ಟೆನಯ್ಯ ತಾತ್ಪರ್‍ಯವನರಿಯದೆ
ತವಕಿಸುವ ಮನವನು ನಿಮ್ಮ ಕಡೆಗೆ ತೆಗೆದುಕೊಂಡು
ಅತಿಶಯದ ತಾತ್ಪರ್ಯ ಗುರುಭಕ್ತಿಯ ಈಯಯ್ಯಾ
ಕಪಿಲಸಿದ್ಧಮಲ್ಲಿಕಾರ್‍ಜುನಾ

[ಅತಿಮಥನ- ಅತಿಯಾದ ವಿಶ್ಲೇಷಣೆ, ದಿತಿಗೆಟ್ಟೆ-ಧೃತಿಗೆಟ್ಟೆ, ಗತಿ-ಚಲನೆ, ಬಾಳು, ಭವಿಷ್ಯ]

ಸಿದ್ಧರಾಮನ ವಚನ. ಇದು ಅತಿಯಾದ ವಿಶ್ಲೇಷಣೆಯ ಅಪಾಯವನ್ನು ಕುರಿತು ಹೇಳುವಂತಿದೆ. ಅತಿಮಥನದ ಪ್ರವೃತ್ತಿಯು ಮನಸ್ಸಿನ ನೆಮ್ಮದಿಯನ್ನು ಕೆಡಿಸುತ್ತದೆ. ಮಥನ ಅನ್ನುವುದು ಅಗತ್ಯ; ಆದರೂ ಅದು ಅತಿ ಆದಾಗ ತೊಂದರೆಕೊಡುವುದು ಖಚಿತ. ಸಿದ್ಧರಾಮನಂತೆಯೇ ಅಲ್ಲಮ ಕೂಡ ವಿಚಾರವೆಂಬುದು ಸಂದೇಹಕ್ಕೆ ಒಳಗು ಎನ್ನುತ್ತಾನೆ.

ಅತಿಯಾದ ಮಥನ ನನ್ನ ಗತಿಯನ್ನು ಕೆಡಿಸಿತ್ತು. ಆದ್ದರಿಂದಲೇ ಅತಿಶಯದ, ವಿಶೇಷವಾದ, ಆಶ್ಚರ್ಯಕರವಾದ, ಬಲು ನೆಮ್ಮದಿಯನ್ನು ತರುವ ಗುರು ಭಕ್ತಿಯನ್ನು ಅರಿಯದೆ ಹೋದೆ. ಗುರು ಭಕ್ತಿ ಅನ್ನುವುದನ್ನು ದೊಡ್ಡದಾದುದರ ಬಗ್ಗೆ ಇರುವ ವಿನಯವೆಂದೂ ಅರ್ಥಮಾಡಿಕೊಳ್ಳಬಹುದು. ಗುರುವಿನ ಬಗ್ಗೆ ಭಕ್ತಿ ಇಲ್ಲದೆ, ಅತಿ ಮಥನದಲ್ಲಿ ತೊಡಗಿ, ಗತಿಗೆಟ್ಟ ನನ್ನ ಮನಸ್ಸನ್ನು ದೇವರು ತನ್ನತ್ತ ತಿರುಗಿಸಿಕೊಂಡು ಎಲ್ಲ ಅರ್ಥದ ಸಾರಾಂಶರೂಪವಾಗಿರುವ ಗುರುಭಕ್ತಿಯನ್ನು ಕೊಡಲಿ ಎಂದು ಪ್ರಾರ್ಥಿಸುತ್ತಾನೆ ಸಿದ್ಧರಾಮ.

ದೇವರು ದೊಡ್ಡವನೇ ಇರಬಹುದು, ಆದರೆ ಕಣ್ಣಿಗೆ ಕಾಣುವ ‘ದೊಡ್ಡ’ ಸಂಗತಿಗಳ ಬಗ್ಗೆ ವಿನಯ, ಭಕ್ತಿ ಇರದಿದ್ದರೆ ನಿಜವಾಗಿ ದೊಡ್ಡವನಾದ ದೇವರು ಸಿಕ್ಕಲಾರ. ಅತಿಮಥನ ಎಂದೂ ನಿಲುಗಡೆಗೆ ಬಾರದು. ಎಲ್ಲ ಮಥನದ ಉದ್ದೇಶವೂ ಒಂದು ನಿರ್ಣಯವನ್ನು ತಲುಪುವುದೇ ತಾನೇ? ಹಾಗೆ ನಿಜವಾದ ತಾತ್ಪರ್ಯವೆಂದರೆ ಗುರುವಿನ ಕುರಿತ ಭಕ್ತಿ, ಅದು ಮಥನದಿಂದ ಅಲ್ಲ, ವಿಶ್ವಾಸದಿಂದ ಮೂಡುವುದು. ಅದು ಬೇಕು ಅನ್ನುತ್ತಾನೆ ಸಿದ್ಧರಾಮ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...