Home / ಲೇಖನ / ಇತರೆ / ವಚನ ವಿಚಾರ – ಅತಿಮಥನ

ವಚನ ವಿಚಾರ – ಅತಿಮಥನ

ಅತಿಮಥನವೆಂಬ ಯೋಗವೆನ್ನ ಗತಿಗೆಡಿಸಿತ್ತಯ್ಯ
ದಿತಿಗೆಟ್ಟೆ ನಾನು ಅದರಿಂದ
ಅತಿಶಯದ ತಾತ್ಪರ್ಯ ಗುರುಭಕ್ತಿಯನರಿಯದೆ
ದಿತಿಗೆಟ್ಟೆನಯ್ಯ ತಾತ್ಪರ್‍ಯವನರಿಯದೆ
ತವಕಿಸುವ ಮನವನು ನಿಮ್ಮ ಕಡೆಗೆ ತೆಗೆದುಕೊಂಡು
ಅತಿಶಯದ ತಾತ್ಪರ್ಯ ಗುರುಭಕ್ತಿಯ ಈಯಯ್ಯಾ
ಕಪಿಲಸಿದ್ಧಮಲ್ಲಿಕಾರ್‍ಜುನಾ

[ಅತಿಮಥನ- ಅತಿಯಾದ ವಿಶ್ಲೇಷಣೆ, ದಿತಿಗೆಟ್ಟೆ-ಧೃತಿಗೆಟ್ಟೆ, ಗತಿ-ಚಲನೆ, ಬಾಳು, ಭವಿಷ್ಯ]

ಸಿದ್ಧರಾಮನ ವಚನ. ಇದು ಅತಿಯಾದ ವಿಶ್ಲೇಷಣೆಯ ಅಪಾಯವನ್ನು ಕುರಿತು ಹೇಳುವಂತಿದೆ. ಅತಿಮಥನದ ಪ್ರವೃತ್ತಿಯು ಮನಸ್ಸಿನ ನೆಮ್ಮದಿಯನ್ನು ಕೆಡಿಸುತ್ತದೆ. ಮಥನ ಅನ್ನುವುದು ಅಗತ್ಯ; ಆದರೂ ಅದು ಅತಿ ಆದಾಗ ತೊಂದರೆಕೊಡುವುದು ಖಚಿತ. ಸಿದ್ಧರಾಮನಂತೆಯೇ ಅಲ್ಲಮ ಕೂಡ ವಿಚಾರವೆಂಬುದು ಸಂದೇಹಕ್ಕೆ ಒಳಗು ಎನ್ನುತ್ತಾನೆ.

ಅತಿಯಾದ ಮಥನ ನನ್ನ ಗತಿಯನ್ನು ಕೆಡಿಸಿತ್ತು. ಆದ್ದರಿಂದಲೇ ಅತಿಶಯದ, ವಿಶೇಷವಾದ, ಆಶ್ಚರ್ಯಕರವಾದ, ಬಲು ನೆಮ್ಮದಿಯನ್ನು ತರುವ ಗುರು ಭಕ್ತಿಯನ್ನು ಅರಿಯದೆ ಹೋದೆ. ಗುರು ಭಕ್ತಿ ಅನ್ನುವುದನ್ನು ದೊಡ್ಡದಾದುದರ ಬಗ್ಗೆ ಇರುವ ವಿನಯವೆಂದೂ ಅರ್ಥಮಾಡಿಕೊಳ್ಳಬಹುದು. ಗುರುವಿನ ಬಗ್ಗೆ ಭಕ್ತಿ ಇಲ್ಲದೆ, ಅತಿ ಮಥನದಲ್ಲಿ ತೊಡಗಿ, ಗತಿಗೆಟ್ಟ ನನ್ನ ಮನಸ್ಸನ್ನು ದೇವರು ತನ್ನತ್ತ ತಿರುಗಿಸಿಕೊಂಡು ಎಲ್ಲ ಅರ್ಥದ ಸಾರಾಂಶರೂಪವಾಗಿರುವ ಗುರುಭಕ್ತಿಯನ್ನು ಕೊಡಲಿ ಎಂದು ಪ್ರಾರ್ಥಿಸುತ್ತಾನೆ ಸಿದ್ಧರಾಮ.

ದೇವರು ದೊಡ್ಡವನೇ ಇರಬಹುದು, ಆದರೆ ಕಣ್ಣಿಗೆ ಕಾಣುವ ‘ದೊಡ್ಡ’ ಸಂಗತಿಗಳ ಬಗ್ಗೆ ವಿನಯ, ಭಕ್ತಿ ಇರದಿದ್ದರೆ ನಿಜವಾಗಿ ದೊಡ್ಡವನಾದ ದೇವರು ಸಿಕ್ಕಲಾರ. ಅತಿಮಥನ ಎಂದೂ ನಿಲುಗಡೆಗೆ ಬಾರದು. ಎಲ್ಲ ಮಥನದ ಉದ್ದೇಶವೂ ಒಂದು ನಿರ್ಣಯವನ್ನು ತಲುಪುವುದೇ ತಾನೇ? ಹಾಗೆ ನಿಜವಾದ ತಾತ್ಪರ್ಯವೆಂದರೆ ಗುರುವಿನ ಕುರಿತ ಭಕ್ತಿ, ಅದು ಮಥನದಿಂದ ಅಲ್ಲ, ವಿಶ್ವಾಸದಿಂದ ಮೂಡುವುದು. ಅದು ಬೇಕು ಅನ್ನುತ್ತಾನೆ ಸಿದ್ಧರಾಮ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...