Home / ಲೇಖನ / ಇತರೆ / ವಚನ ವಿಚಾರ – ನೀರಿನಂಥ ಮನಸ್ಸು

ವಚನ ವಿಚಾರ – ನೀರಿನಂಥ ಮನಸ್ಸು

ಅನೇಕ ತೆರದ ಯೋನಿಮುಖಂಗಳ ಪೊಕ್ಕು
ನೀರ್‍ಗುಡಿಯಲೆಂದು ಪೋದಡೆ
ಸುಡು ಪೋಗೆಂದು ನೂಂಕಿತ್ತೆ ಜಲ
ಅದರಂತಿರಬೇಡಾ ಹಿರಿಯರ ಮನ
ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ
ನಿಮ್ಮದೊಂದು ಸಮತಾಗುಣವನ್ನನೆಂದು ಪೊದ್ದಿರ್ಪುದು ಹೇಳಾ
ಕಪಿಲಸಿದ್ಧಮಲ್ಲಿಕಾರ್ಜುನಾ

[೫ನೆಯ ಸಾಲು: ಓದಿನ ಅನುಕೂಲಕ್ಕೆ ಹೀಗೆ ಬಿಡಿಸಿಕೊಳ್ಳಿ: ಮನ-ಇಚ್ಛಂದ-ಆಗದೆ-ಒಂದೆ-ಅಂದದಲಿ-ಇಪ್ಪಂತೆ-ಅಪ್ಪ-ಆ; ಪೊದ್ದಿರ್ಪುದು-ಹೊಂದಿರುವುದು]

ಸಿದ್ಧರಾಮನ ವಚನ.
ಹಿಂದಿನ ಜನ್ಮದಲ್ಲಿ ಏನೇ ಆಗಿರಲಿ, ಅಥವಾ ಮಾಡಬಾರದ ಕೆಲಸಗಳನ್ನೇ ಮಾಡಿರಲಿ, ಅಂಥವನು ನೀರು ಕುಡಿಯಲೆಂದು ಹೋದರೆ ‘ನೀನು ಅಯೋಗ್ಯ’ ಎಂದು ಅವನ ದಾಹವನ್ನು ತಣಿಸಲು ನಿರಾಕರಿಸುತ್ತದೆಯೇ ನೀರು? ಇಲ್ಲವಲ್ಲಾ. ನಿಜವಾದ ಹಿರಿಯರ ಮನ ಹಾಗೆ ಇರಬೇಕಲ್ಲವೇ? ಯಾವುದರ ಬಗ್ಗೆಯೂ ತಿರಸ್ಕಾರದ ಲವಲೇಶವೂ ಇಲ್ಲದಂತಿರುವುದೇ ನಿಜವಾದ ಹಿರಿತನ. ಮನಸ್ಸು ಇಚ್ಛಂದವಾಗದೆ (ಇಬ್ಬಾಗವಾಗು) ಒಂದೇ ಅಂದದಲ್ಲಿ ಇರುವಂಥ ನಿಮ್ಮ ಸಮತಾಗುಣವನ್ನು ನನ್ನ ಮನಸ್ಸು ಎಂದು ಹೊಂದೀತು ಎಂದು ಸಿದ್ಧರಾಮ ಕೇಳುತ್ತಾನೆ.

ದೇವರು ಎಂಬುದಿದ್ದರೆ ಅದು ಸಮತಾಗುಣವೇ. ಸಿದ್ಧರಾಮನ ದೃಷ್ಟಿಯಲ್ಲಿ ಏನನ್ನೂ ತಿರಸ್ಕರಿಸಿದ ಗುಣವೇ, ಯಾವ ಗುಣದಿಂದಲೂ ಮನಸ್ಸು ಇಚ್ಚಂದವಾಗದೇ ಇರುವುದೇ, ದೇವರ ಗುಣ, ಅಂಥ ಗುಣ ಬೇಕು ಅನ್ನುವುದು ಬಯಕೆ.

ನಿಸರ್ಗಕ್ಕೆ ಇಂಥ ಸಮತಾಗುಣವಿರುವುದರಿಂದಲೇ ನಾವು ಬದುಕಿದ್ದೇವೆ. ಕೇವಲ ‘ಒಳ್ಳೆ’ಯವರಿಗೆ ಮಾತ್ರವೇ ಮಳೆ ಸುರಿಯುವುದು, ಸೂರ್ಯ ಹೊಳೆಯುವುದು, ನದಿ ಹರಿಯುವುದು, ಮರ ಹಣ್ಣು ಕೊಡುವುದು ಎಂದಾಗಿದ್ದರೆ ಲೋಕದಲ್ಲಿ ನೂರಕ್ಕೆ ತೊಂಬತ್ತೊಂಬತ್ತು ಜನ ಬದುಕುವುದಕ್ಕೇ ಆಗುತ್ತಿರಲಿಲ್ಲವೇನೋ! ಸೇಡಿಲ್ಲದ, ಅವಜ್ಞೆ ಇಲ್ಲದ, ತಿರಸ್ಕಾರವಿಲ್ಲದ ಗುಣ ಎಂದು ಸಮತೆಯನ್ನು ವರ್ಣಿಸಿರುವುದು ಹೊಸತೆಂಬಂತಿದೆ.

ಛಂದ ಮತ್ತು ಅಂದ ಪದಗಳನ್ನು ಒಟ್ಟುಗೂಡಿಸಿರುವ ರೀತಿಯೂ ಗಮನಾರ್ಹ. ಛಂದ ಅನ್ನುವುದು ಛಂದಸ್ಸನ್ನೂ ಚಂದವನ್ನೂ ಒಟ್ಟಿಗೆ ಸೂಚಿಸೀತು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...