Home / ಲೇಖನ / ಇತರೆ / ವಚನ ವಿಚಾರ – ನೀರಿನಂಥ ಮನಸ್ಸು

ವಚನ ವಿಚಾರ – ನೀರಿನಂಥ ಮನಸ್ಸು

ಅನೇಕ ತೆರದ ಯೋನಿಮುಖಂಗಳ ಪೊಕ್ಕು
ನೀರ್‍ಗುಡಿಯಲೆಂದು ಪೋದಡೆ
ಸುಡು ಪೋಗೆಂದು ನೂಂಕಿತ್ತೆ ಜಲ
ಅದರಂತಿರಬೇಡಾ ಹಿರಿಯರ ಮನ
ಮನವಿಚ್ಛಂದವಾಗದೊಂದೆಯಂದದಲಿಪ್ಪಂತಪ್ಪಾ
ನಿಮ್ಮದೊಂದು ಸಮತಾಗುಣವನ್ನನೆಂದು ಪೊದ್ದಿರ್ಪುದು ಹೇಳಾ
ಕಪಿಲಸಿದ್ಧಮಲ್ಲಿಕಾರ್ಜುನಾ

[೫ನೆಯ ಸಾಲು: ಓದಿನ ಅನುಕೂಲಕ್ಕೆ ಹೀಗೆ ಬಿಡಿಸಿಕೊಳ್ಳಿ: ಮನ-ಇಚ್ಛಂದ-ಆಗದೆ-ಒಂದೆ-ಅಂದದಲಿ-ಇಪ್ಪಂತೆ-ಅಪ್ಪ-ಆ; ಪೊದ್ದಿರ್ಪುದು-ಹೊಂದಿರುವುದು]

ಸಿದ್ಧರಾಮನ ವಚನ.
ಹಿಂದಿನ ಜನ್ಮದಲ್ಲಿ ಏನೇ ಆಗಿರಲಿ, ಅಥವಾ ಮಾಡಬಾರದ ಕೆಲಸಗಳನ್ನೇ ಮಾಡಿರಲಿ, ಅಂಥವನು ನೀರು ಕುಡಿಯಲೆಂದು ಹೋದರೆ ‘ನೀನು ಅಯೋಗ್ಯ’ ಎಂದು ಅವನ ದಾಹವನ್ನು ತಣಿಸಲು ನಿರಾಕರಿಸುತ್ತದೆಯೇ ನೀರು? ಇಲ್ಲವಲ್ಲಾ. ನಿಜವಾದ ಹಿರಿಯರ ಮನ ಹಾಗೆ ಇರಬೇಕಲ್ಲವೇ? ಯಾವುದರ ಬಗ್ಗೆಯೂ ತಿರಸ್ಕಾರದ ಲವಲೇಶವೂ ಇಲ್ಲದಂತಿರುವುದೇ ನಿಜವಾದ ಹಿರಿತನ. ಮನಸ್ಸು ಇಚ್ಛಂದವಾಗದೆ (ಇಬ್ಬಾಗವಾಗು) ಒಂದೇ ಅಂದದಲ್ಲಿ ಇರುವಂಥ ನಿಮ್ಮ ಸಮತಾಗುಣವನ್ನು ನನ್ನ ಮನಸ್ಸು ಎಂದು ಹೊಂದೀತು ಎಂದು ಸಿದ್ಧರಾಮ ಕೇಳುತ್ತಾನೆ.

ದೇವರು ಎಂಬುದಿದ್ದರೆ ಅದು ಸಮತಾಗುಣವೇ. ಸಿದ್ಧರಾಮನ ದೃಷ್ಟಿಯಲ್ಲಿ ಏನನ್ನೂ ತಿರಸ್ಕರಿಸಿದ ಗುಣವೇ, ಯಾವ ಗುಣದಿಂದಲೂ ಮನಸ್ಸು ಇಚ್ಚಂದವಾಗದೇ ಇರುವುದೇ, ದೇವರ ಗುಣ, ಅಂಥ ಗುಣ ಬೇಕು ಅನ್ನುವುದು ಬಯಕೆ.

ನಿಸರ್ಗಕ್ಕೆ ಇಂಥ ಸಮತಾಗುಣವಿರುವುದರಿಂದಲೇ ನಾವು ಬದುಕಿದ್ದೇವೆ. ಕೇವಲ ‘ಒಳ್ಳೆ’ಯವರಿಗೆ ಮಾತ್ರವೇ ಮಳೆ ಸುರಿಯುವುದು, ಸೂರ್ಯ ಹೊಳೆಯುವುದು, ನದಿ ಹರಿಯುವುದು, ಮರ ಹಣ್ಣು ಕೊಡುವುದು ಎಂದಾಗಿದ್ದರೆ ಲೋಕದಲ್ಲಿ ನೂರಕ್ಕೆ ತೊಂಬತ್ತೊಂಬತ್ತು ಜನ ಬದುಕುವುದಕ್ಕೇ ಆಗುತ್ತಿರಲಿಲ್ಲವೇನೋ! ಸೇಡಿಲ್ಲದ, ಅವಜ್ಞೆ ಇಲ್ಲದ, ತಿರಸ್ಕಾರವಿಲ್ಲದ ಗುಣ ಎಂದು ಸಮತೆಯನ್ನು ವರ್ಣಿಸಿರುವುದು ಹೊಸತೆಂಬಂತಿದೆ.

ಛಂದ ಮತ್ತು ಅಂದ ಪದಗಳನ್ನು ಒಟ್ಟುಗೂಡಿಸಿರುವ ರೀತಿಯೂ ಗಮನಾರ್ಹ. ಛಂದ ಅನ್ನುವುದು ಛಂದಸ್ಸನ್ನೂ ಚಂದವನ್ನೂ ಒಟ್ಟಿಗೆ ಸೂಚಿಸೀತು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...