Home / ಲೇಖನ / ಇತರೆ / ವಚನ ವಿಚಾರ – ನಾನು ಒಲಿಸುವ ಪರಿ ಹೇಗೆ

ವಚನ ವಿಚಾರ – ನಾನು ಒಲಿಸುವ ಪರಿ ಹೇಗೆ

ಅಯ್ಯಾ
ನೀನೆನ್ನ ಮೊರೆಯನಾಲಿಸಿದಡಾಲಿಸು
ಆಲಿಸದಿರ್ದಡೆ ಮಾಣು
ಅಯ್ಯಾ
ನೀನೆನ್ನ ದುಃಖವ ನೋಡಿದಡೆ ನೋಡು
ನೋಡದಿರ್ದಡೆ ಮಾಣು
ನಿನಗಿದು ವಿಧಿಯೆ
ನೀನೊಲ್ಲದೊಡೆ ಆನೊಲಿಸುವ ಪರಿಯೆಂತಯ್ಯಾ

[ಆಲಿಸದಿರ್ದಡೆ ಕೇಳದಿದ್ದರೆ ಮಾಣು-ಬಿಡು,]

ಅಕ್ಕಮಹಾದೇವಿಯ ವಚನ. ಈ ವಚನದಲ್ಲಿ ‘ಎನಗಿದು ವಿಧಿಯೇ’ ಎಂದೇನಾದರೂ ಇದ್ದಿದ್ದರೆ ಅರ್ಥದ ತೊಡಕು ಏನೂ ಉಂಟಾಗುತ್ತಿರಲಿಲ್ಲ. ಅಥವಾ ನಾನು ನೋಡಿದ ಪುಸ್ತಕದಲ್ಲಿ ಅಚ್ಚಿನ ದೋಷವಿದೆಯೋ ಗೊತ್ತಿಲ್ಲ. ಆದರೆ ಹೀಗಿರುವುದರಿಂದ ಮಾತ್ರ ಈ ವಚನ ಹಲವು ಪ್ರಶ್ನೆಗಳನ್ನು ಎತ್ತುವಂತೆ ತೋರುತ್ತದೆ. ನನ್ನ ಮೊರೆಯನ್ನು ಕೇಳಬೇಕೆನಿಸಿದರೆ ಕೇಳು, ಇಲ್ಲದಿದ್ದರೆ ಬಿಡು; ನೀನು ನನ್ನನ್ನು ನೋಡಬೇಕೆನಿಸಿದರೆ ನೋಡು, ಇಲ್ಲದಿದ್ದರೆ ಬಿಡು. ಹೀಗಿರುವುದು ನಿನ್ನ ವಿಧಿಯೋ? ನೀನು ನನ್ನ ಒಲಿಯದಿದ್ದರೆ ನಾನು ನಿನ್ನನ್ನು ಒಲಿಸುವ ಪರಿ ಹೇಗೆ ಎಂದು ಅಕ್ಕ ಕೇಳುತ್ತಾಳೆ.

ದೇವರು ನಿರ್ಗುಣ ಅನ್ನುತ್ತಾರಲ್ಲವೆ, ಹಾಗಿರಬೇಕಾದದ್ದು ಅವನ ಹಣೆಯಬರಹ. ದೇವರು ಯಾರನ್ನೂ ದ್ವೇಷಿಸಲೂ ಆರ, ಪ್ರೀತಿಸಲೂ ಆರ. ಹೀಗಿರುವುದು ಅವನ ವಿಧಿಯೇ ಆದರೆ ತಾನು ದೇವರನ್ನು ಎಷ್ಟು ಪ್ರೀತಿಸಿದರೆ ಏನು ಬಂದ ಹಾಗಾಯಿತು? ಅವನಲ್ಲಿ ನನ್ನ ಬಗ್ಗೆ ಪ್ರೀತಿ ಹುಟ್ಟದಿದ್ದರೆ ಏನು ತಾನೇ ಮಾಡಬಲ್ಲೆ ಎಂಬ ದಿಕ್ಕುಗಾಣದ ಕಳವಳ ಈ ವಚನದಲ್ಲಿರುವಂತಿದೆ.

ಇದೇ ಸ್ವರೂಪದ ಇನ್ನೊಂದು ದೀರ್ಘವಾದ ವಚನವೂ ಇದೆ. ಅದರಲ್ಲಿ ನೀನು ಏನು ಮಾಡಿದರೂ ನಾನು ಮಾತ್ರ ನಿನ್ನನ್ನು ಪ್ರೀತಿಸದೆ ಇರಲಾರೆ ಅನ್ನುವ ನಿಲುವು ಕಾಣುತ್ತದೆ. ಮನೋಭಾವಗಳ ಸೂಕ್ಷ್ಮವನ್ನು ಅಕ್ಕನ ಹಾಗೆ ಮಾತಿನಲ್ಲಿ ಹಿಡಿದಿಟ್ಟವರು ಕಡಮೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...