Home / ಲೇಖನ / ಇತರೆ / ವಚನ ವಿಚಾರ – ನಾನು ಒಲಿಸುವ ಪರಿ ಹೇಗೆ

ವಚನ ವಿಚಾರ – ನಾನು ಒಲಿಸುವ ಪರಿ ಹೇಗೆ

ಅಯ್ಯಾ
ನೀನೆನ್ನ ಮೊರೆಯನಾಲಿಸಿದಡಾಲಿಸು
ಆಲಿಸದಿರ್ದಡೆ ಮಾಣು
ಅಯ್ಯಾ
ನೀನೆನ್ನ ದುಃಖವ ನೋಡಿದಡೆ ನೋಡು
ನೋಡದಿರ್ದಡೆ ಮಾಣು
ನಿನಗಿದು ವಿಧಿಯೆ
ನೀನೊಲ್ಲದೊಡೆ ಆನೊಲಿಸುವ ಪರಿಯೆಂತಯ್ಯಾ

[ಆಲಿಸದಿರ್ದಡೆ ಕೇಳದಿದ್ದರೆ ಮಾಣು-ಬಿಡು,]

ಅಕ್ಕಮಹಾದೇವಿಯ ವಚನ. ಈ ವಚನದಲ್ಲಿ ‘ಎನಗಿದು ವಿಧಿಯೇ’ ಎಂದೇನಾದರೂ ಇದ್ದಿದ್ದರೆ ಅರ್ಥದ ತೊಡಕು ಏನೂ ಉಂಟಾಗುತ್ತಿರಲಿಲ್ಲ. ಅಥವಾ ನಾನು ನೋಡಿದ ಪುಸ್ತಕದಲ್ಲಿ ಅಚ್ಚಿನ ದೋಷವಿದೆಯೋ ಗೊತ್ತಿಲ್ಲ. ಆದರೆ ಹೀಗಿರುವುದರಿಂದ ಮಾತ್ರ ಈ ವಚನ ಹಲವು ಪ್ರಶ್ನೆಗಳನ್ನು ಎತ್ತುವಂತೆ ತೋರುತ್ತದೆ. ನನ್ನ ಮೊರೆಯನ್ನು ಕೇಳಬೇಕೆನಿಸಿದರೆ ಕೇಳು, ಇಲ್ಲದಿದ್ದರೆ ಬಿಡು; ನೀನು ನನ್ನನ್ನು ನೋಡಬೇಕೆನಿಸಿದರೆ ನೋಡು, ಇಲ್ಲದಿದ್ದರೆ ಬಿಡು. ಹೀಗಿರುವುದು ನಿನ್ನ ವಿಧಿಯೋ? ನೀನು ನನ್ನ ಒಲಿಯದಿದ್ದರೆ ನಾನು ನಿನ್ನನ್ನು ಒಲಿಸುವ ಪರಿ ಹೇಗೆ ಎಂದು ಅಕ್ಕ ಕೇಳುತ್ತಾಳೆ.

ದೇವರು ನಿರ್ಗುಣ ಅನ್ನುತ್ತಾರಲ್ಲವೆ, ಹಾಗಿರಬೇಕಾದದ್ದು ಅವನ ಹಣೆಯಬರಹ. ದೇವರು ಯಾರನ್ನೂ ದ್ವೇಷಿಸಲೂ ಆರ, ಪ್ರೀತಿಸಲೂ ಆರ. ಹೀಗಿರುವುದು ಅವನ ವಿಧಿಯೇ ಆದರೆ ತಾನು ದೇವರನ್ನು ಎಷ್ಟು ಪ್ರೀತಿಸಿದರೆ ಏನು ಬಂದ ಹಾಗಾಯಿತು? ಅವನಲ್ಲಿ ನನ್ನ ಬಗ್ಗೆ ಪ್ರೀತಿ ಹುಟ್ಟದಿದ್ದರೆ ಏನು ತಾನೇ ಮಾಡಬಲ್ಲೆ ಎಂಬ ದಿಕ್ಕುಗಾಣದ ಕಳವಳ ಈ ವಚನದಲ್ಲಿರುವಂತಿದೆ.

ಇದೇ ಸ್ವರೂಪದ ಇನ್ನೊಂದು ದೀರ್ಘವಾದ ವಚನವೂ ಇದೆ. ಅದರಲ್ಲಿ ನೀನು ಏನು ಮಾಡಿದರೂ ನಾನು ಮಾತ್ರ ನಿನ್ನನ್ನು ಪ್ರೀತಿಸದೆ ಇರಲಾರೆ ಅನ್ನುವ ನಿಲುವು ಕಾಣುತ್ತದೆ. ಮನೋಭಾವಗಳ ಸೂಕ್ಷ್ಮವನ್ನು ಅಕ್ಕನ ಹಾಗೆ ಮಾತಿನಲ್ಲಿ ಹಿಡಿದಿಟ್ಟವರು ಕಡಮೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...