Home / ಲೇಖನ / ಇತರೆ / ವಚನ ವಿಚಾರ – ನಾನು ಒಲಿಸುವ ಪರಿ ಹೇಗೆ

ವಚನ ವಿಚಾರ – ನಾನು ಒಲಿಸುವ ಪರಿ ಹೇಗೆ

ಅಯ್ಯಾ
ನೀನೆನ್ನ ಮೊರೆಯನಾಲಿಸಿದಡಾಲಿಸು
ಆಲಿಸದಿರ್ದಡೆ ಮಾಣು
ಅಯ್ಯಾ
ನೀನೆನ್ನ ದುಃಖವ ನೋಡಿದಡೆ ನೋಡು
ನೋಡದಿರ್ದಡೆ ಮಾಣು
ನಿನಗಿದು ವಿಧಿಯೆ
ನೀನೊಲ್ಲದೊಡೆ ಆನೊಲಿಸುವ ಪರಿಯೆಂತಯ್ಯಾ

[ಆಲಿಸದಿರ್ದಡೆ ಕೇಳದಿದ್ದರೆ ಮಾಣು-ಬಿಡು,]

ಅಕ್ಕಮಹಾದೇವಿಯ ವಚನ. ಈ ವಚನದಲ್ಲಿ ‘ಎನಗಿದು ವಿಧಿಯೇ’ ಎಂದೇನಾದರೂ ಇದ್ದಿದ್ದರೆ ಅರ್ಥದ ತೊಡಕು ಏನೂ ಉಂಟಾಗುತ್ತಿರಲಿಲ್ಲ. ಅಥವಾ ನಾನು ನೋಡಿದ ಪುಸ್ತಕದಲ್ಲಿ ಅಚ್ಚಿನ ದೋಷವಿದೆಯೋ ಗೊತ್ತಿಲ್ಲ. ಆದರೆ ಹೀಗಿರುವುದರಿಂದ ಮಾತ್ರ ಈ ವಚನ ಹಲವು ಪ್ರಶ್ನೆಗಳನ್ನು ಎತ್ತುವಂತೆ ತೋರುತ್ತದೆ. ನನ್ನ ಮೊರೆಯನ್ನು ಕೇಳಬೇಕೆನಿಸಿದರೆ ಕೇಳು, ಇಲ್ಲದಿದ್ದರೆ ಬಿಡು; ನೀನು ನನ್ನನ್ನು ನೋಡಬೇಕೆನಿಸಿದರೆ ನೋಡು, ಇಲ್ಲದಿದ್ದರೆ ಬಿಡು. ಹೀಗಿರುವುದು ನಿನ್ನ ವಿಧಿಯೋ? ನೀನು ನನ್ನ ಒಲಿಯದಿದ್ದರೆ ನಾನು ನಿನ್ನನ್ನು ಒಲಿಸುವ ಪರಿ ಹೇಗೆ ಎಂದು ಅಕ್ಕ ಕೇಳುತ್ತಾಳೆ.

ದೇವರು ನಿರ್ಗುಣ ಅನ್ನುತ್ತಾರಲ್ಲವೆ, ಹಾಗಿರಬೇಕಾದದ್ದು ಅವನ ಹಣೆಯಬರಹ. ದೇವರು ಯಾರನ್ನೂ ದ್ವೇಷಿಸಲೂ ಆರ, ಪ್ರೀತಿಸಲೂ ಆರ. ಹೀಗಿರುವುದು ಅವನ ವಿಧಿಯೇ ಆದರೆ ತಾನು ದೇವರನ್ನು ಎಷ್ಟು ಪ್ರೀತಿಸಿದರೆ ಏನು ಬಂದ ಹಾಗಾಯಿತು? ಅವನಲ್ಲಿ ನನ್ನ ಬಗ್ಗೆ ಪ್ರೀತಿ ಹುಟ್ಟದಿದ್ದರೆ ಏನು ತಾನೇ ಮಾಡಬಲ್ಲೆ ಎಂಬ ದಿಕ್ಕುಗಾಣದ ಕಳವಳ ಈ ವಚನದಲ್ಲಿರುವಂತಿದೆ.

ಇದೇ ಸ್ವರೂಪದ ಇನ್ನೊಂದು ದೀರ್ಘವಾದ ವಚನವೂ ಇದೆ. ಅದರಲ್ಲಿ ನೀನು ಏನು ಮಾಡಿದರೂ ನಾನು ಮಾತ್ರ ನಿನ್ನನ್ನು ಪ್ರೀತಿಸದೆ ಇರಲಾರೆ ಅನ್ನುವ ನಿಲುವು ಕಾಣುತ್ತದೆ. ಮನೋಭಾವಗಳ ಸೂಕ್ಷ್ಮವನ್ನು ಅಕ್ಕನ ಹಾಗೆ ಮಾತಿನಲ್ಲಿ ಹಿಡಿದಿಟ್ಟವರು ಕಡಮೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...